ಬಾಬಾ ರಾಮ್ ದೇವ್ 
ದೇಶ

ತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೊಟೀಸ್ ಮೇಲಿನ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಪಟ್ಟ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ನವದೆಹಲಿ: ಜನರನ್ನು ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಪಟ್ಟ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ಪತಂಜಲಿಯ ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವ ಜಾಹೀರಾತುಗಳನ್ನು ಹಿಂಪಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಸೂಚಿಸುವ ಅಫಿಡವಿಟ್ ಸಲ್ಲಿಸಲು ಸಂಸ್ಥೆಯ ಪರ ವಕೀಲರು ಸಮಯ ಕೋರಿದ್ದನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ.

ಮೂರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ನ್ಯಾಯಪೀಠ ಈ ಸಂದರ್ಭದಲ್ಲಿ ಹೇಳಿತು. ಪ್ರತಿವಾದಿಗಳು 5 ರಿಂದ 7 ರವರೆಗೆ (ಪತಂಜಲಿ ಆಯುರ್ವೇದ ಲಿಮಿಟೆಡ್, ಬಾಲಕೃಷ್ಣ ಮತ್ತು ರಾಮ್‌ದೇವ್) ನೀಡಲಾದ ನಿಂದನೆ ನೋಟಿಸ್‌ನಲ್ಲಿ ಆದೇಶಗಳನ್ನು ಕಾಯ್ದಿರಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರ (SLA) ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಮತ್ತು ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ಪತಂಜಲಿ ನಡೆಸಿದ ಅಭಿಯಾನವನ್ನು ಆರೋಪಿಸಿ ಐಎಂಎ 2022 ರಲ್ಲಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಅಸ್ತಮಾ ಸೇರಿದಂತೆ ಕೆಲವು ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳುವ ಪತಂಜಲಿ ಆಯುರ್ವೇದದ ಜಾಹೀರಾತು ಸಂಪೂರ್ಣವಾಗಿ ಸುಳ್ಳಾಗಿದ್ದು ಜನರನ್ನು ತಪ್ಪುದಾರಿಗೆಳೆಯುತ್ತದೆ ಎಂದು ಐಎಂಎ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT