"Weak Congress governments threw country into fire of Naxalism...": PM Modi in Jharkhand 
ದೇಶ

ಬಜೆಟ್‌ನ ಶೇ.15 ರಷ್ಟು ಹಣವನ್ನು ಕಾಂಗ್ರೆಸ್ ಮುಸ್ಲಿಮರಿಗೆ ಹಂಚಿಕೆ ಮಾಡಲಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ತನ್ನ ಹಿಂದಿನ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರದ ಬಜೆಟ್‌ನ ಶೇ. 15 ರಷ್ಟು ಹಣವನ್ನು ಹಂಚಿಕೆ ಮಾಡಲು ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಾಸಿಕ್: ಕಾಂಗ್ರೆಸ್ ತನ್ನ ಹಿಂದಿನ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರದ ಬಜೆಟ್‌ನ ಶೇ. 15 ರಷ್ಟು ಹಣವನ್ನು ಹಂಚಿಕೆ ಮಾಡಲು ಬಯಸಿತ್ತು ಎಂದು ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ, ಬಜೆಟ್ ಅಥವಾ ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಅವಕಾಶ ನೀಡುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಇಂದು ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಪಿಂಪಲ್ಗಾಂವ್ ಬಸವಂತ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಬಜೆಟ್ ಅನ್ನು ವಿಭಜಿಸುವುದು ಅಪಾಯಕಾರಿ ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ದೃಢವಾಗಿ ವಿರೋಧಿಸಿದ್ದರು ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಟ್ಟು ಬಜೆಟ್‌ನಲ್ಲಿ ಶೇ 15ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಲು ಯೋಜನೆ ರೂಪಿಸಿತ್ತು ಎಂದು ಮೋದಿ ಆರೋಪಿಸಿದರು.

"ನಾನು(ಗುಜರಾತ್‌ನ) ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಈ ಪ್ರಸ್ತಾವನೆ ತಂದಿತ್ತು. ಬಿಜೆಪಿ ಈ ಕ್ರಮವನ್ನು ಬಲವಾಗಿ ವಿರೋಧಿಸಿತು ಮತ್ತು ಆದ್ದರಿಂದ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ. ಆದರೆ ಕಾಂಗ್ರೆಸ್ ಈ ಪ್ರಸ್ತಾವನೆಯನ್ನು ಮತ್ತೆ ಜಾರಿಗೆ ತರಲು ಬಯಸಿದೆ" ಎಂದು ಪ್ರಧಾನಿ ಹೇಳಿದರು.

ಅಂಬೇಡ್ಕರ್ ಅವರು ಧರ್ಮ ಆಧಾರಿತ ಮೀಸಲಾತಿಯನ್ನು ಬಲವಾಗಿ ವಿರೋಧಿಸಿದ್ದರು. ಆದರೆ ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು' ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿ

IND vs NZ 2nd T20: ಭಾರತಕ್ಕೆ 7 ವಿಕೆಟ್‌ಗಳ ಗೆಲುವು

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷದಿಂದಲೇ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧ- ವೈರಿಗಳು ಒಂದಾಗುವ ಸಾಧ್ಯತೆ?

SCROLL FOR NEXT