ಸುಪ್ರೀಂ ಕೋರ್ಟ್ 
ದೇಶ

ಕಾಡ್ಗಿಚ್ಚು ನಿಯಂತ್ರಿಸಲು ವಿಫಲ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ; ಮುಖ್ಯ ಕಾರ್ಯದರ್ಶಿಗೆ ಸಮನ್ಸ್

ಕಾಡ್ಗಿಚ್ಚು ನಿಯಂತ್ರಿಸಲು ವಿಫಲವಾದ ಉತ್ತರಾಖಂಡ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಕಾಡ್ಗಿಚ್ಚು ನಿಯಂತ್ರಿಸಲು ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕ್ರಮವು "ಅಸಮರ್ಪಕ" ಎಂದಿದೆ.

ನವದೆಹಲಿ: ಕಾಡ್ಗಿಚ್ಚು ನಿಯಂತ್ರಿಸಲು ವಿಫಲವಾದ ಉತ್ತರಾಖಂಡ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಕಾಡ್ಗಿಚ್ಚು ನಿಯಂತ್ರಿಸಲು ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕ್ರಮವು "ಅಸಮರ್ಪಕ" ಎಂದು ಹೇಳಲು ನೋವಾಗುತ್ತಿದೆ ಎಂದು ಬುಧವಾರ ಹೇಳಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠವು ಉತ್ತರಾಖಂಡ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡದ್ದು, ಮೇ 17 ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ, ಅನೇಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿದ್ದರೂ, ಅವುಗಳ ಅನುಷ್ಠಾನಕ್ಕೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದನ್ನು ಗಮನಿಸಿತು.

ರಾಜ್ಯದ ಅರಣ್ಯ ಇಲಾಖೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿಯಿರುವ ಬಗ್ಗೆಯೂ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ಹೇಳಿದೆ.

ದೇವಭೂಮಿ ಉತ್ತರಾಖಂಡದಲ್ಲಿ ಕಾಡುತ್ತಿರುವ ಕಾಡ್ಗಿಚ್ಚು ಕುರಿತ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಈ ತಿಂಗಳ ಆರಂಭದಲ್ಲಿ, ಉತ್ತರಾಖಂಡದ ನೈನಿತಾಲ್‌ನ ವಸತಿ ಪ್ರದೇಶಕ್ಕೆ ಕಾಡ್ಗಿಚ್ಚು ಅಪಾಯಕಾರಿಯಾಗಿ ತಲುಪಿತ್ತು. ಅಗ್ನಿಶಾಮಕ ಕಾರ್ಯಾಚರಣೆಗಾಗಿ ಬೋಟಿಂಗ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ಮತ್ತು ಸೇನೆಯ ಸಿಬ್ಬಂದಿಯನ್ನು ಕಾರ್ಯಾಚರಣೆಗಾಗಿ ಕರೆ ತರಲಾಗಿತ್ತು. ನೈನಿತಾಲ್ ದೇಶದಾದ್ಯಂತ ಅತ್ಯಂತ ಪ್ರಸಿದ್ಧವಾದ ಗಿರಿಧಾಮಗಳಲ್ಲಿ ಒಂದಾಗಿದೆ. ಇದು ನೈನಿ ಸರೋವರಕ್ಕೆ ಹೆಸರುವಾಸಿಯಾಗಿದೆ. ಉತ್ತರಾಖಂಡದ ಹಲವೆಡೆ ಕಾಡ್ಗಿಚ್ಚು ಇನ್ನೂ ಅಬ್ಬರಿಸಿದ್ದು, ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT