ಸಾಂದರ್ಭಿಕ ಚಿತ್ರ  
ದೇಶ

ದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಟಿಶ್ಯೂ ಪೇಪರ್ ನಲ್ಲಿ 'ಬಾಂಬ್' ಬರಹ, ಕೆಲಹೊತ್ತು ಭೀತಿ

ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ದೆಹಲಿ-ವಡೋದರಾ ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಯೊಬ್ಬರು ವಿಮಾನದ ವಾಶ್ ರೂಂನಲ್ಲಿ "ಬಾಂಬ್" ಎಂದು ಬರೆದಿರುವ ಟಿಶ್ಯೂ ಪೇಪರ್ ನ್ನು ಕಂಡು ಭಯಭೀತರಾಗಿ ವಿಮಾನದಲ್ಲಿದ್ದವರೆಲ್ಲಾ ತಿಳಿಸಿ ಕೆಲಕಾಲ ಗೊಂದಲ ಉಂಟಾಯಿತು.

ನವದೆಹಲಿ: ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ದೆಹಲಿ-ವಡೋದರಾ ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಯೊಬ್ಬರು ವಿಮಾನದ ವಾಶ್ ರೂಂನಲ್ಲಿ "ಬಾಂಬ್" ಎಂದು ಬರೆದಿರುವ ಟಿಶ್ಯೂ ಪೇಪರ್ ನ್ನು ಕಂಡು ಭಯಭೀತರಾಗಿ ವಿಮಾನದಲ್ಲಿದ್ದವರೆಲ್ಲಾ ತಿಳಿಸಿ ಕೆಲಕಾಲ ಗೊಂದಲ ಉಂಟಾಯಿತು.

ನಿನ್ನೆ ಸಂಜೆ ಬಾಂಬ್ ಎಂದು ಬರೆದ ಟಿಶ್ಯೂ ಪೇಪರ್ ಪತ್ತೆಯಾದ ನಂತರ ಇಡೀ ವಿಮಾನದಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ 7 ಗಂಟೆಗೆ ಟಿಶ್ಯೂ ಪೇಪರ್ ನ್ನು ಸಿಬ್ಬಂದಿ ಗುರುತಿಸಿದಾಗ ವಿಮಾನವು ಟೇಕ್-ಆಫ್‌ಗೆ ಸಿದ್ಧವಾಗಿದೆ ಎಂದು ಹೇಳಿದರು. ಕೂಡಲೇ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಮತ್ತು ದೆಹಲಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಯುವಂತೆ ಸೂಚಿಸಲಾಯಿತು. ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿತ್ತಾದರೂ ಏನೂ ಪತ್ತೆಯಾಗಿಲ್ಲ. ನಂತರ ಪ್ರಯಾಣಿಕರು ಮತ್ತೊಂದು ವಿಮಾನವನ್ನು ಏರಿ ಪ್ರಯಾಣ ಸಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT