ಸಾಂದರ್ಭಿಕ ಚಿತ್ರ 
ದೇಶ

PMLA ಸೆಕ್ಷನ್ 19 ರ ಅಡಿಯಲ್ಲಿ ED ಆರೋಪಿಗಳನ್ನು ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ವಿಶೇಷ ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆಯ ದೂರನ್ನು ಪರಿಗಣಿಸಿದ ನಂತರ ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ವಿಶೇಷ ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆಯ ದೂರನ್ನು ಪರಿಗಣಿಸಿದ ನಂತರ ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು ಆರೋಪಿಯು ನ್ಯಾಯಾಲಯದ ಮುಂದೆ ಹಾಜರಾದಾಗ, ಅವನ ಕಸ್ಟಡಿಯನ್ನು ಪಡೆಯಲು ಸಂಸ್ಥೆಯು ಸಂಬಂಧಪಟ್ಟ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ.

ಆರೋಪಿಯು ವಿಶೇಷ ನ್ಯಾಯಾಲಯಕ್ಕೆ ಸಮನ್ಸ್ ಮೂಲಕ ಹಾಜರಾದರೆ ಅವರು ಕಸ್ಟಡಿಯಲ್ಲಿದ್ದಾರೆ ಎಂದು ಪರಿಗಣಿಸುವುದಿಲ್ಲ. ಸಮನ್ಸ್ ಗೆ ಅನುಗುಣವಾಗಿ ನ್ಯಾಯಾಲಯದ ಮುಂದೆ ಹಾಜರಾದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ ತೀರ್ಪು ನೀಡಿದೆ.

ಪಿಎಂಎಲ್‌ಎ ಸೆಕ್ಷನ್‌ 45 ರ ಷರತ್ತುಗಳು ಆರೋಪಿಗಳಿಗೆ ಅನ್ವಯಿಸುವುದಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯು ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ನ್ಯಾಯಾಲವು ಮೊದಲು ಪಬ್ಲಿಕ್‌ ಪ್ರಾಜಿಕ್ಯೂಟರ್‌ನ ವಿಚಾರಣೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ.

ಆರೋಪಿಯು ತಪ್ಪಿತಸ್ಥನಲ್ಲ ಹಾಗೂ ಬಿಡುಗಡೆಯಾದ ನಂತರ ಅಂತಹ ಅಪರಾಧವನ್ನು ಮಾಡುವ ಸಾಧ್ಯತೆಯಿಲ್ಲ ಎಂದು ಮನವರಿಕೆ ಮಾಡಿದಾಗ ಮಾತ್ರ ಷರತ್ತುಗಳು ಅನ್ವಯಿಸುತ್ತವೆ. ಈ ವೇಳೆ ಅಂತಹ ಆರೋಪಿಗೆ ಜಾಮೀನು ನೀಡಬಹುದು. ವಿಶೇಷ ನ್ಯಾಯಾಲಯವು ಅಪರಾಧದ ಅರಿವು ಪಡೆಯುವ ಪ್ರಕರಣಗಳಲ್ಲಿ ಕೂಡ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯು ಜಾಮೀನಿಗಾಗಿ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕೆ ಎಂಬ ಪ್ರಶ್ನೆಗೆ ಸುಪ್ರೀಂಕೋರ್ಟ್‌ ಈ ತೀರ್ಪು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT