ವಿಭವ್ ಕುಮಾರ್- ಸ್ವಾತಿ ಮಲೀವಾಲ್ 
ದೇಶ

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಆಪ್ತನಿಗೆ NCW ಸಮನ್ಸ್

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ವಿರುದ್ಧದ ಹಲ್ಲೆ ಪ್ರಕರಣದಲ್ಲಿ ಕೇಜ್ರಿವಾಲ್ ಆಪ್ತನಿಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ ಸಿಡಬ್ಲ್ಯು) ಸಮನ್ಸ್ ಜಾರಿಗೊಳಿಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ವಿರುದ್ಧದ ಹಲ್ಲೆ ಪ್ರಕರಣದಲ್ಲಿ ಕೇಜ್ರಿವಾಲ್ ಆಪ್ತನಿಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ ಸಿಡಬ್ಲ್ಯು) ಸಮನ್ಸ್ ಜಾರಿಗೊಳಿಸಿದೆ. ವಿಭವ್ ಕುಮಾರ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದು, ಆತನನ್ನು ವಿಚಾರಣೆಗೆ ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಹಾಜರಾಗಲು ಸೂಚಿಸಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) "ಮಾಜಿ ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ" ಎಂಬ ಶೀರ್ಷಿಕೆಯ ಮಾಧ್ಯಮ ಪೋಸ್ಟ್ ನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಮಾಧ್ಯಮ ವರದಿಯಲ್ಲಿ ಸ್ವಾತಿ ಮಾಲಿವಾಲ್ ಮುಖ್ಯಮಂತ್ರಿಯ ನಿವಾಸದಲ್ಲಿ ವಿಭವ್ ತಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಈ ಆರೋಪಗಳ ಹಿನ್ನೆಲೆಯಲ್ಲಿ, ಆಯೋಗ ನೋಟಿಸ್ ಜಾರಿಗೊಳಿಸಿದೆ. ನೊಟೀಸ್ ನ್ನು ಅನುಸರಿಸಲು ವಿಫಲವಾದರೆ ಅಗತ್ಯವೆಂದು ಪರಿಗಣಿಸಿದ ಮುಂದಿನ ಕ್ರಮಗಳಿಗೆ ದಾರಿ ಮಾಡಿಕೊಡಲಿದೆ ಎಂದು ಆಯೋಗ ಹೇಳಿದೆ.

ಸ್ವಾತಿ ಮಲಿವಾಲ್ ಅಧಿಕೃತವಾಗಿ ಇನ್ನಷ್ಟೇ ದೂರು ದಾಖಲಿಸಬೇಕಿದೆ. ಮಂಗಳವಾರ, ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಮಲಿವಾಲ್ ಅವರೊಂದಿಗಿನ ಘಟನೆಯು "ಅತ್ಯಂತ ಖಂಡನೀಯ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT