ಸಂಜಯ್ ರಾವತ್ 
ದೇಶ

ಹೋರ್ಡಿಂಗ್ ಕುಸಿದು 16 ಜನ ಮೃತಪಟ್ಟ ಪ್ರದೇಶದಲ್ಲಿ ರೋಡ್‌ಶೋ ನಡೆಸುವುದು ಅಮಾನವೀಯ: ಮೋದಿ ವಿರುದ್ಧ ರಾವತ್ ಕಿಡಿ

ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ.

ಮುಂಬೈ: ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಗುರುವಾರ ಕಿಡಿಕಾರಿದ್ದಾರೆ.

ಘಾಟ್‌ಕೋಪರ್ ಪಶ್ಚಿಮದಿಂದ ಘಾಟ್‌ಕೋಪರ್ ಪೂರ್ವಕ್ಕೆ ಪ್ರಧಾನಿ ಮೋದಿಯವರ ರೋಡ್‌ಶೋ ನಿಮಿತ್ತ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ರಸ್ತೆಗಳು ಮತ್ತು ಮೆಟ್ರೋ ರೈಲು ಸೇವೆಗಳನ್ನು ಬಂದ್ ಮಾಡಲಾಗಿತ್ತು ಎಂದು ಅವರು ಹೇಳಿದರು.

"ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ರಸ್ತೆಗಳನ್ನು ಮುಚ್ಚಿ ಜನರಿಗೆ ಅನಾನುಕೂಲತೆ ಉಂಟುಮಾಡುವ ಇಂತಹ ಘಟನೆ ಎಂದಿಗೂ ನಡೆದಿಲ್ಲ. ಹೋರ್ಡಿಂಗ್ ಕುಸಿತು 16 ಜನ ಸಾವನ್ನಪ್ಪಿದ ಸ್ಥಳದಲ್ಲೇ ರೋಡ್‌ಶೋ ನಡೆಸಿರುವುದು ಅಮಾನವೀಯವಾಗಿದೆ" ಎಂದು ಸೇನಾ(ಯುಬಿಟಿ) ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಾಟ್‌ಕೋಪರ್‌ನ ಛೇಡಾ ನಗರ ಪ್ರದೇಶದಲ್ಲಿ ಸೋಮವಾರ ಬೀಸಿದ ಬಿರುಗಾಳಿಗೆ 120 x 120 ಅಡಿಗಳ ಬೃಹತ್ ಹೋರ್ಡಿಂಗ್ ಕುಸಿದು 16 ಜನರು ಸಾವನ್ನಪ್ಪಿದ್ದರು ಮತ್ತು 75 ಮಂದಿ ಗಾಯಗೊಂಡಿದ್ದರು.

ಪ್ರಧಾನಿ ಮೋದಿ ಬುಧವಾರ ಸಂಜೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳ ಪರವಾಗಿ ಘಾಟ್‌ಕೋಪರ್‌ನಲ್ಲಿ ಮೆಗಾ ರೋಡ್‌ಶೋ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT