ಪ್ರಿಯಾಂಕಾ ಗಾಂಧಿ 
ದೇಶ

I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ. ಜಮೆ: Priyanka Gandhi

ಹಾಲಿ ಲೋಕಸಭಾ ಚುನಾವಣೆಯಲ್ಲಿ INDI ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ರಾಯ್ ಬರೇಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ INDI ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಗುರುವಾರ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದ ಮಹಿಳೆಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಸರ್ಕಾರ ರಚನೆಯಾದರೆ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತದೆ.

ದೇಶದಾದ್ಯಂತ ನಮ್ಮ ಸಹೋದರಿಯರು ಉತ್ಸಾಹದಿಂದ INDIA ಸರ್ಕಾರವನ್ನು ರಚಿಸಲು ಸಿದ್ಧರಾಗಿದ್ದು, ಜುಲೈನಿಂದ, ಮಹಿಳೆಯರ ಖಾತೆಗೆ ಪ್ರತಿ ತಿಂಗಳು 8500 ರೂ. ಅಂದರೆ, ವಾರ್ಷಿಕವಾಗಿ 1 ಲಕ್ಷ ರೂ. ಠೇವಣಿ ಇಡುತ್ತೇವೆ. ಇದರಿಂದ ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬದಲಾಯಿಸಬಹುದು ಎಂದು ಅವರು ಹೇಳಿದರು.

ಅಂತೆಯೇ ಸರ್ಕಾರಿ ಉದ್ಯೋಗಗಳ ಪಾಲು ಮಹಿಳಾ ಶಕ್ತಿಯನ್ನು ಬಲಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದ ಪ್ರಿಯಾಂಕಾ, 'ಆಶಾ, ಅಂಗನವಾಡಿ ಹಾಗೂ ಅಡುಗೆಯ ಸಹೋದರಿಯರ ಗೌರವಧನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು. 25 ಲಕ್ಷ ರೂ.ಗಳ ವಿಮಾ ಯೋಜನೆ ನಿಮ್ಮನ್ನು ವೈದ್ಯಕೀಯ ವೆಚ್ಚದ ಕೂಪದಿಂದ ಹೊರತರಲಿದೆ ಎಂದು ಭರವಸೆ ನೀಡಿದರು.

ಕಳೆದವಾರವಷ್ಟೇ ಕಾಂಗ್ರೆಸ್ ನಾಯಕ ಹಾಗೂ ತಮ್ಮ ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವಾಗ, 'ಹೆಚ್ಚಿನ ಹಣದುಬ್ಬರವನ್ನು ಎದುರಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದ್ದರು.

'ಹಣದುಬ್ಬರದಿಂದ ಜನಜೀವನ ದುಸ್ತರವಾಗಿದೆ ಎಂದು ದೇಶಾದ್ಯಂತ ಮಹಿಳೆಯರು ಹೇಳುತ್ತಿದ್ದಾರೆ, ಮನೆ ನಿರ್ವಹಣೆ ಕಷ್ಟವಾಗುತ್ತಿದ್ದು, ಪ್ರತಿ ಗೃಹೋಪಯೋಗಿ ವಸ್ತು ಕೈಗೆಟುಕದಂತಾಗಿದೆ. 400 ರೂ.ಗಳ ಸಿಲಿಂಡರ್ ಈಗ 1200 ರೂಗೆ ಏರಿಕೆಯಾಗಿದೆ. ಅಡುಗೆ ಎಣ್ಣೆ, ಬೇಳೆಕಾಳುಗಳು, ಹಿಟ್ಟು, ಸಕ್ಕರೆ, ಅಕ್ಕಿ, ತರಕಾರಿ ಎಲ್ಲವೂ ಅತ್ಯಂತ ದುಬಾರಿಯಾಗಿದೆ ಎಂದು ಅವರು ಆರೋಪಿಸಿದರು.

ಅಲ್ಲದೆ ಮಕ್ಕಳ ಶಿಕ್ಷಣ, ವೈದ್ಯಕೀಯ ವೆಚ್ಚ ಭರಿಸುವುದು ಕಷ್ಟವಾಗುತ್ತಿದೆ, ಇಂದು ಸಾರ್ವಜನಿಕರು ಉತ್ತರದಾಯಿತ್ವಕ್ಕೆ ಆಗ್ರಹಿಸುತ್ತಿದ್ದು, ಪ್ರಧಾನಿ ಉತ್ತರ ನೀಡುವ ಬದಲು ಅಸಂಬದ್ಧ ವಿಷಯಗಳ ಬಗ್ಗೆ ಮಾತನಾಡುವ ಮೂಲಕ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ದೇಶವಾಸಿಗಳು ಎಲ್ಲವನ್ನೂ ಅರ್ಥಮಾಡಿಕೊಂಡಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಅರಿತು ಮತ ಚಲಾಯಿಸುತ್ತಾರೆ ಎಂದು ಪ್ರಿಯಾಂಕಾ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT