ಸುಪ್ರೀಂ ಕೋರ್ಟ್  online
ದೇಶ

ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ವಿನಾಯಿತಿ ನೀಡಿಲ್ಲ; ತೀರ್ಪಿನ ವಿಮರ್ಶೆಗಳಿಗೆ ಸ್ವಾಗತ- ಸುಪ್ರೀಂ ಕೋರ್ಟ್

ದೆಹಲಿ ಸಿಎಂ ಕೇಜ್ರಿವಾಲ್ ಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡಿರುವ ವಿಷಯದಲ್ಲಿ ಯಾವುದೇ ವಿನಾಯಿತಿ ತೋರಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡಿರುವ ವಿಷಯದಲ್ಲಿ ಯಾವುದೇ ವಿನಾಯಿತಿ ತೋರಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇದೇ ವೇಳೆ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದರ ತೀರ್ಪಿಗೆ ವ್ಯಕ್ತವಾಗುತ್ತಿರುವ ಟೀಕೆ/ ವಿಮರ್ಶೆಗಳನ್ನು ಸ್ವಾಗತಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ನ್ಯಾ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಅವರಿದ್ದ ಪೀಠ ಜಾರಿ ನಿರ್ದೇಶನಾಲಯದ ಪ್ರತಿವಾದ ಹಾಗೂ ಹೇಳಿಕೆಗಳನ್ನು ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಿಗೆ ಮಧ್ಯಂತರ ಜಾಮೀನಿಗೆ ಸಂಬಂಧಿಸಿದ ಹೇಳಿಕೆಗಳ ಕುರಿತು ಕೇಜ್ರಿವಾಲ್ ಅವರ ವಕೀಲರ ಹೇಳಿಕೆಗಳನ್ನು ಮರುಪರಿಶೀಲಿಸಲು ಕೋರ್ಟ್ ನಿರಾಕರಿಸಿದೆ.

"ನಾವು ಯಾರಿಗೂ ಯಾವುದೇ ವಿನಾಯಿತಿ ನೀಡಿಲ್ಲ, ನಮ್ಮ ಆದೇಶದಲ್ಲಿ ಸಮರ್ಥನೆಗೆ ಬೇಕಾದ ಅಂಶಗಳನ್ನು ನಾವು ಹೊಂದಿರುವುದಾಗಿ ತಿಳಿಸಿದ್ದೇವೆ" ಎಂದು ನ್ಯಾಯ ಪೀಠ ಹೇಳಿದೆ. ತೀರ್ಪಿನ ವಿಮರ್ಶಾತ್ಮಕ ವಿಶ್ಲೇಷಣೆಗೆ "ಸ್ವಾಗತವಾಗಿದೆ" ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಚುನಾವಣಾ ಪ್ರಚಾರಗಳಲ್ಲಿ ಕೇಜ್ರಿವಾಲ್ ಮಾಡಿದ ಭಾಷಣಗಳಿಗೆ ಆಕ್ಷೇಪಿಸಿದರು, ಜನರು ಎಎಪಿಗೆ ಮತ ಹಾಕಿದರೆ ಅವರು ಜೂನ್ 2 ರಂದು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದರು. ಈ ಹೇಳಿಕೆಗೆ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದ್ದರು. "ಇದು ಅವರ ಊಹೆ. ನಾವು ಏನನ್ನೂ ಹೇಳಲು ಸಾಧ್ಯವಿಲ್ಲ" ಎಂದು ನ್ಯಾಯ ಪೀಠ ಮೆಹ್ತಾಗೆ ಹೇಳಿದೆ.

ಮೇ 10ರಂದು, ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಜೂನ್ 2 ರಂದು ಶರಣಾಗುವಂತೆ ಕೋರ್ಟ್ ಕೇಳಿದೆ. ಮಾರ್ಚ್ 21 ರಂದು ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT