ಸಾಂದರ್ಭಿಕ ಚಿತ್ರ 
ದೇಶ

Andhra Pradesh Assembly Election: YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೆ ಸ್ವಂತ ತಾಯಿಯನ್ನೇ ಕೊಂದ TDP ಕಾರ್ಯಕರ್ತ

ನೆರೆಯ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣಾ ರಣಕಣ ರಂಗೇರಿರುವಂತೆಯೇ ಇತ್ತ TDP ಕಾರ್ಯಕರ್ತನೊಬ್ಬ ತನ್ನ ತಾಯಿ YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕೋಪಂದಿಂದ ಕೊಂದು ಹಾಕಿದ್ದಾನೆ.

ಅನಂತಪುರ: ನೆರೆಯ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣಾ ರಣಕಣ ರಂಗೇರಿರುವಂತೆಯೇ ಇತ್ತ TDP ಕಾರ್ಯಕರ್ತನೊಬ್ಬ ತನ್ನ ತಾಯಿ YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕೋಪಂದಿಂದ ಕೊಂದು ಹಾಕಿದ್ದಾನೆ.

ಹೌದು.. ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕಂಬದೂರು ಮಂಡಲದ ಉಪರಪಳ್ಳಿಯಲ್ಲಿ ಈ ಘಟನೆ ನಡೆದಿದ್ದು, ವಡ್ಡೆ ವೆಂಕಟೇಶುಲು (35) ಎಂಬ ವ್ಯಕ್ತಿ ತನ್ನ ತಾಯಿ ವಡ್ಡೆ ಸುಂಕಮ್ಮ (65) YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕುಡಿದ ಅಮಲಿನಲ್ಲಿ ಕೋಪಂದಿಂದ ಆಕೆಯನ್ನು ಕೊಂದು ಹಾಕಿದ್ದಾನೆ.

ಮೂಲಗಳ ಪ್ರಕಾರ ವಡ್ಡೆ ವೆಂಕಟೇಶುಲು ತೆಲುಗು ದೇಶಂ (TDP) ಪಕ್ಷದ ಕಾರ್ಯಕರ್ತನಾಗಿದ್ದು, ಸೋಮವಾರ ಅಂದರೆ ಮೇ 13ರಂದು ನಡೆದ ಮತದಾನದ ವೇಳೆ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮನೆಗೆ ಬಂದ ಸುಂಕಮ್ಮ ಮಗನ ಬಳಿ ವೈಸಿಪಿ ಪಕ್ಷಕ್ಕೆ ಮತ ಹಾಕಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ವೆಂಕಟೇಶುಲು ತನ್ನ ತಾಯಿಯೊಂದಿಗೆ ಜಗಳ ಮಾಡಿದ್ದು, ಈ ವೇಳೆ ನೋಡ ನೋಡುತ್ತಿದ್ದಂತೆಯೇ ಆಕ್ರೋಶದಿಂದ ಕಬ್ಬಿಣದ ಸುತ್ತಿಗೆಯಿಂದ ಆಕೆಯ ತಲೆಗೆ ಬಲವಾಗಿ ಬಡಿದಿದ್ದಾನೆ. ಆಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ವೆಂಕಟೇಶುಲು ಸ್ಥಳದಿಂದ ಪರಾರಿಯಾಗಿದ್ದಾನೆ.

ನೆರೆಮನೆಯವರು ಮನೆಗೆ ಧಾವಿಸಿದಾಗ ಸುಂಕಮ್ಮ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಕಂಬದೂರು ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ವಡ್ಡೆ ವೆಂಕಟೇಶಲುಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT