ಸಾಂದರ್ಭಿಕ ಚಿತ್ರ 
ದೇಶ

Andhra Pradesh Assembly Election: YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೆ ಸ್ವಂತ ತಾಯಿಯನ್ನೇ ಕೊಂದ TDP ಕಾರ್ಯಕರ್ತ

ನೆರೆಯ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣಾ ರಣಕಣ ರಂಗೇರಿರುವಂತೆಯೇ ಇತ್ತ TDP ಕಾರ್ಯಕರ್ತನೊಬ್ಬ ತನ್ನ ತಾಯಿ YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕೋಪಂದಿಂದ ಕೊಂದು ಹಾಕಿದ್ದಾನೆ.

ಅನಂತಪುರ: ನೆರೆಯ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣಾ ರಣಕಣ ರಂಗೇರಿರುವಂತೆಯೇ ಇತ್ತ TDP ಕಾರ್ಯಕರ್ತನೊಬ್ಬ ತನ್ನ ತಾಯಿ YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕೋಪಂದಿಂದ ಕೊಂದು ಹಾಕಿದ್ದಾನೆ.

ಹೌದು.. ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕಂಬದೂರು ಮಂಡಲದ ಉಪರಪಳ್ಳಿಯಲ್ಲಿ ಈ ಘಟನೆ ನಡೆದಿದ್ದು, ವಡ್ಡೆ ವೆಂಕಟೇಶುಲು (35) ಎಂಬ ವ್ಯಕ್ತಿ ತನ್ನ ತಾಯಿ ವಡ್ಡೆ ಸುಂಕಮ್ಮ (65) YSR Congress ಪಕ್ಷಕ್ಕೆ ಮತ ಹಾಕಿದ ಕಾರಣಕ್ಕೇ ಕುಡಿದ ಅಮಲಿನಲ್ಲಿ ಕೋಪಂದಿಂದ ಆಕೆಯನ್ನು ಕೊಂದು ಹಾಕಿದ್ದಾನೆ.

ಮೂಲಗಳ ಪ್ರಕಾರ ವಡ್ಡೆ ವೆಂಕಟೇಶುಲು ತೆಲುಗು ದೇಶಂ (TDP) ಪಕ್ಷದ ಕಾರ್ಯಕರ್ತನಾಗಿದ್ದು, ಸೋಮವಾರ ಅಂದರೆ ಮೇ 13ರಂದು ನಡೆದ ಮತದಾನದ ವೇಳೆ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮನೆಗೆ ಬಂದ ಸುಂಕಮ್ಮ ಮಗನ ಬಳಿ ವೈಸಿಪಿ ಪಕ್ಷಕ್ಕೆ ಮತ ಹಾಕಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ವೆಂಕಟೇಶುಲು ತನ್ನ ತಾಯಿಯೊಂದಿಗೆ ಜಗಳ ಮಾಡಿದ್ದು, ಈ ವೇಳೆ ನೋಡ ನೋಡುತ್ತಿದ್ದಂತೆಯೇ ಆಕ್ರೋಶದಿಂದ ಕಬ್ಬಿಣದ ಸುತ್ತಿಗೆಯಿಂದ ಆಕೆಯ ತಲೆಗೆ ಬಲವಾಗಿ ಬಡಿದಿದ್ದಾನೆ. ಆಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ವೆಂಕಟೇಶುಲು ಸ್ಥಳದಿಂದ ಪರಾರಿಯಾಗಿದ್ದಾನೆ.

ನೆರೆಮನೆಯವರು ಮನೆಗೆ ಧಾವಿಸಿದಾಗ ಸುಂಕಮ್ಮ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಕಂಬದೂರು ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ವಡ್ಡೆ ವೆಂಕಟೇಶಲುಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel