ಕಾವೇರಿ ನದಿ ನೀರು 
ದೇಶ

ಕರ್ನಾಟಕದಲ್ಲಿ ನೀರಿನ ಅಭಾವ: ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ತಿರಸ್ಕರಿಸಿದೆ.

ನವದೆಹಲಿ: ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ತಿರಸ್ಕರಿಸಿದೆ.

ಉಭಯ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅವಶ್ಯಕತೆಗೆ ಆದ್ಯತೆ ನೀಡುವಂತೆ ಸಮಿತಿ ಆದೇಶಿಸಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಯನ್ನು ಹಂಚಿಕೊಳ್ಳುವ ಉಭಯ ರಾಜ್ಯಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸಿದೆ. ಪ್ರತಿ ದಿನ ಕೇವಲ 150 ಕ್ಯೂಸೆಕ್ ನೀರು ಬರುತ್ತಿದ್ದ ಅಂತರರಾಜ್ಯ ಗಡಿ ಬಿಂದು ಬಿಳಿಗುಂಡ್ಲುವಿಗೆ ಕಳೆದ ಐದು ದಿನಗಳಿಂದ ದಿನಕ್ಕೆ ಸುಮಾರು 1,100 ಕ್ಯೂಸೆಕ್ ನೀರು ಬರುತ್ತಿದೆ.

96ನೇ ಸಭೆಯ ಅಧ್ಯಕ್ಷತೆಯ ನಂತರ ಟಿಎನ್ಐಇ ಜೊತೆಗೆ ಮಾತನಾಡಿದ ಸಿಡಬ್ಲ್ಯುಆರ್‌ಸಿ ಅಧ್ಯಕ್ಷ ವಿನೀತ್ ಗುಪ್ತಾ, ಎರಡೂ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಆಯಾ ಜಲಾಶಯಗಳಲ್ಲಿ ಸಾಕಷ್ಟು ನೀರನ್ನು ಹೊಂದಿವೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ಜಲವಿವಾದ ನ್ಯಾಯಮಂಡಳಿಯ (ಸಿಡಬ್ಲ್ಯುಡಿಟಿ) ಅಂತಿಮ ತೀರ್ಪಿನ ಪ್ರಕಾರ, ಪರಿಸರ ಹರಿವನ್ನು ಕಾಪಾಡಿಕೊಳ್ಳುವಂತೆ ಕರ್ನಾಟಕಕ್ಕೆ ಸಮಿತಿ ಆದೇಶಿಸಿದೆ.

ಸಿಡಬ್ಲ್ಯುಡಿಟಿ ಪ್ರಕಾರ, ಕರ್ನಾಟಕವು ಫೆಬ್ರುವರಿಯಿಂದ ಮೇವರೆಗೆ ದಿನಕ್ಕೆ ಸುಮಾರು 1,000 ಕ್ಯೂಸೆಕ್‌ ನೀರು ಬಿಡುವ ಮೂಲಕ ಬಿಳಿಗುಂಡ್ಲುವಿನಲ್ಲಿ ಪರಿಸರದ ಹರಿವನ್ನು ಕಾಪಾಡಿಕೊಳ್ಳಬೇಕು. ಈ ಆದೇಶವು ಸಾಮಾನ್ಯ ವರ್ಷಕ್ಕೆ ಅನ್ವಯವಾಗುತ್ತದೆ ಮತ್ತು ಬರದಿಂದ ತತ್ತರಿಸಿರುವ 2023-24 ರಂತಹ ಸಂಕಷ್ಟದ ವರ್ಷಕ್ಕೆ ಅಲ್ಲ ಎಂದಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಗೆ (ಸಿಡಬ್ಲ್ಯುಆರ್‌ಸಿ) ಸಲ್ಲಿಸಿರುವ ಅರ್ಜಿಯಲ್ಲಿ, ತಮಿಳುನಾಡು ರಾಜ್ಯವು ಸಂಕಷ್ಟದ ವರ್ಷಗಳಲ್ಲಿ ನೀರು ಹಂಚಿಕೆ ಮಾಡಲು ವೈಜ್ಞಾನಿಕವಾಗಿ ಆಧಾರಿತ ಸೂತ್ರಕ್ಕಾಗಿ ವಿನಂತಿ ಮಾಡಿದೆ.

ತಮಿಳು ದೈನಿಕದ ಆರೋಪಗಳನ್ನು ತಳ್ಳಿಹಾಕಿದ ಸರ್ಕಾರ

ಚೆನ್ನೈ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಗಳಿಗೆ ಖುದ್ದಾಗಿ ಹಾಜರಾಗದಂತೆ ಮತ್ತು ಆನ್‌ಲೈನ್‌ನಲ್ಲಿ ಮಾತ್ರವೇ ಹಾಜರಾಗಬೇಕೆಂದು ಜಲಸಂಪನ್ಮೂಲ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬ ಆರೋಪವನ್ನು ರಾಜ್ಯ ಸರ್ಕಾರ ಗುರುವಾರ ತಳ್ಳಿಹಾಕಿದೆ.

'ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಸುದ್ದಿ ಸುಳ್ಳು. ಸರ್ಕಾರವು ಅಂತಹ ಯಾವುದೇ ಆದೇಶವನ್ನು ನೀಡಿಲ್ಲ. ಅಧಿಕಾರಿಗಳು ತಪ್ಪದೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.

ಈಮಧ್ಯೆ, ಆನ್‌ಲೈನ್‌ನಲ್ಲಿ ಮಾತ್ರ ಸಭೆಗಳಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಡಿಎಂಕೆ ಸರ್ಕಾರದ ನಡೆಯನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಎಂಎಂಕೆ ಮುಖ್ಯಸ್ಥ ಟಿಟಿವಿ ದಿನಕರನ್ ಖಂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT