ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ತಂಡವು ಗುರುವಾರ ತಡರಾತ್ರಿ ಘಾಟ್ಕೋಪರ್ ಹೋರ್ಡಿಂಗ್ ಕುಸಿತ ಪ್ರಕರಣದ ಆರೋಪಿ ಭವೇಶ್ ಭಿಂಡೆ (ಕಪ್ಪು ಬಟ್ಟೆಯಲ್ಲಿ) ಯನ್ನು ಉದಯಪುರದಲ್ಲಿ ಬಂಧಿಸಿ ಮುಂಬೈ ವಿಮಾನ ನಿಲ್ದಾಣಕ್ಕೆ ಕರೆತಂದರು. 
ದೇಶ

ಘಾಟ್ಕೋಪರ್ ಹೋರ್ಡಿಂಗ್ ಕುಸಿತ: ರಾಜಸ್ಥಾನದ ಉದಯಪುರದಲ್ಲಿ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆತಂದ ಪೊಲೀಸರು

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 16 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಶುಕ್ರವಾರ ಮುಂಜಾನೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 16 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಶುಕ್ರವಾರ ಮುಂಜಾನೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಸಂಜೆ ಉಪನಗರ ಘಾಟ್ಕೋಪರ್‌ನಲ್ಲಿ ಕುಸಿದ ಜಾಹೀರಾತು ಫಲಕವನ್ನು ಇತ್ತೀಚೆಗೆ ಅಳವಡಿಸಿದ್ದ M/s Ego Media Pvt.Ltd ಜಾಹೀರಾತು ಸಂಸ್ಥೆಯ ನಿರ್ದೇಶಕ ಭವೇಶ್ ಭಿಂಡೆ ಅವರನ್ನು ಗುರುವಾರ ರಾಜಸ್ಥಾನದ ಉದಯಪುರದಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ನಂತರ ಭಿಂಡೆ ಅವರನ್ನು ಅಹಮದಾಬಾದ್‌ಗೆ ಕರೆದೊಯ್ದು ಅಲ್ಲಿಂದ ವಿಮಾನದ ಮೂಲಕ ಮುಂಬೈಗೆ ಕರೆತರಲಾಯಿತು. ಭಿಂಡೆ ಅವರೊಂದಿಗೆ ಪೊಲೀಸ್ ತಂಡವು ಮುಂಜಾನೆ 5 ಗಂಟೆಗೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು ಮತ್ತು ಅವರನ್ನು ಅಪರಾಧ ವಿಭಾಗದ ಕಚೇರಿಗೆ ಕರೆದೊಯ್ಯಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ಮೂರು ದಿನಗಳ ಕಾಲ ಭಿಂಡೆಯನ್ನು ಹಿಂಬಾಲಿಸಿದ ನಂತರ, ನಗರ ಪೊಲೀಸರು ಗುರುವಾರ ಉದಯಪುರದಲ್ಲಿ ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಜೋರಾದ ಗಾಳಿ ಮತ್ತು ಭಾರಿ ಮಳೆಯಿಂದಾಗಿ ಘಾಟ್ಕೋಪರ್‌ನ ಛೇದನಗರ ಪ್ರದೇಶದಲ್ಲಿ 120 ಅಡಿ x 120 ಅಡಿಯ ಬೃಹತ್ ಗಾತ್ರದ ಹೋರ್ಡಿಂಗ್ ಪೆಟ್ರೋಲ್ ಬಂಕ್ ಮೇಲೆ ಬಿದ್ದಿತ್ತು. ಘಟನೆಯಲ್ಲಿ 16 ಜನರು ಸಾವಿಗೀಡಾಗಿದ್ದರು ಮತ್ತು 75 ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT