ರಶ್ಮಿಕಾ ಮಂದಣ್ಣ, ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

'ಅಟಲ್ ಸೇತುವೆ... ಜನರ ಜೊತೆ ಹೃದಯವನ್ನು ಸಂಪರ್ಕಿಸುತ್ತದೆ' ಎಂದ ನಟಿ ರಶ್ಮಿಕಾ: 'ಇದಕ್ಕಿಂತ ತೃಪ್ತಿಕರ ವಿಷಯ ಬೇರೆ ಇಲ್ಲ' ಎಂದ ಪ್ರಧಾನಿ ಮೋದಿ

ಈ ವಿಡಿಯೋವನ್ನು ರಶ್ಮಿಕಾ ಮಂದಣ್ಣ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ, ಪೂರ್ವ ಭಾರತದಿಂದ ಪಶ್ಚಿಮ ಭಾರತದವರೆಗೆ ಜನರನ್ನು ಹಾಗೂ ಹೃದಯಗಳನ್ನು ಕನೆಕ್ಟ್ ಮಾಡುತ್ತಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ನವದೆಹಲಿ: ಕನ್ನಡ ಮೂಲದ ನಟಿ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಅಟಲ್ ಸೇತು ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿ ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿದ್ದು, ಈ ಟ್ವೀಟ್​ನ ಪ್ರಧಾನಿ ನರೇಂದ್ರ ಮೋದಿ ಅವರು ರೀಟ್ವೀಟ್ ಮಾಡಿದ್ದಾರೆ.

ಭಾರತದ ಅತ್ಯಂತ ಉದ್ದನೆಯ ಸಮುದ್ರ ಸೇತುವೆ ಎನ್ನುವ ಖ್ಯಾತಿ ಅಟಲ್ ಸೇತು​ವೆಗೆ ಇದೆ. ಮುಂಬೈ ಹಾಗೂ ನವಿ ಮುಂಬೈ ಸಂಪರ್ಕಿಸುತ್ತದೆ. ಈ ಬಗ್ಗೆ ರಶ್ಮಿಕಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಬಗ್ಗೆ ಮಾತನಾಡಿರುವ ರಶ್ಮಿಕಾ, ‘ಭಾರತದ ಅತಿ ಉದ್ದನೆಯ ಸಮುದ್ರ ಬ್ರಿಜ್. 22 ಕಿಲೋಮೀಟರ್ ಉದ್ದ ಇದೆ. ಎರಡು ಗಂಟೆಗಳ ಪ್ರಯಾಣ ಈಗ 20 ನಿಮಿಷಗಳಲ್ಲಿ ಮುಗಿಯುತ್ತದೆ. ನಂಬಲೂ ಅಸಾಧ್ಯ. ಕೆಲ ವರ್ಷಗಳ ಹಿಂದೆ ಯಾರೂ ಇದನ್ನು ಊಹಿಸಿಯೂ ಇರಲಿಲ್ಲ’ ಎಂದು ಹೇಳಿದ್ದಾರೆ.

ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದರೆ, ಏಳೇ ವರ್ಷಗಳಲ್ಲಿ ಈ ದೊಡ್ಡ ಬ್ರಿಡ್ಜ್ ನಿರ್ಮಾಣ ಮಾಡಿದ್ದೇವೆ. ಅಟಲ್ ಸೇತು ಇದು ಕೇವಲ ಸೇತುವೆ ಅಲ್ಲ, ಯುವ ಭಾರತಕ್ಕೆ ಇದು ಗ್ಯಾರಂಟಿ. ಈ ರೀತಿಯ ನೂರು ಅಟಲ್ ಸೇತುವೆ ಸ್ಥಾಪಿಸಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಹೇಳಿರುವ ವಿಡಿಯೊಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಇದು ಬಿಜೆಪಿಯಿಂದ ಹಣ ಪಡೆದುಕೊಂಡು ಮಾಡಿರುವ ಪ್ರಚಾರದ ವಿಡಿಯೊ ಎಂದು ಟೀಕೆ ಮಾಡುತ್ತಿದ್ದಾರೆ.

ಈ ವಿಡಿಯೋವನ್ನು ರಶ್ಮಿಕಾ ಮಂದಣ್ಣ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ, ಪೂರ್ವ ಭಾರತದಿಂದ ಪಶ್ಚಿಮ ಭಾರತದವರೆಗೆ ಜನರನ್ನು ಹಾಗೂ ಹೃದಯಗಳನ್ನು ಕನೆಕ್ಟ್ ಮಾಡುತ್ತಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಇದನ್ನು ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದುದ್ದು ಬೇರೆನೂ ಇಲ್ಲ’ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT