ದೇಶ

ನಿರ್ಭಯಾಗೆ ನ್ಯಾಯ ಕೇಳಿದ ಎಎಪಿ ನಾಯಕರು ಇಂದು ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ: ಸ್ವಾತಿ ಮಲಿವಾಲ್

ನಿರ್ಭಯಾ ಪ್ರಕರಣದಲ್ಲಿ ನ್ಯಾಯ ಕೇಳಿದ್ದ ತಮ್ಮ ಪಕ್ಷದ ಸಹೋದ್ಯೋಗಿಗಳು ಇದೀಗ ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಎಎಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದ್ದಿದ್ದರೆ ಬಹುಶಃ ನನಗೆ ಇಷ್ಟು ಕೆಟ್ಟ ಪರಿಸ್ಥಿತಿ ಎದುರಾಗುತ್ತಿರಲಿಲ್ಲ! ಎಂದಿದ್ದಾರೆ.

ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ನ್ಯಾಯ ಕೇಳಿದ್ದ ತಮ್ಮ ಪಕ್ಷದ ಸಹೋದ್ಯೋಗಿಗಳು ಇದೀಗ ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಎಎಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದ್ದಿದ್ದರೆ ಬಹುಶಃ ನನಗೆ ಇಷ್ಟು ಕೆಟ್ಟ ಪರಿಸ್ಥಿತಿ ಎದುರಾಗುತ್ತಿರಲಿಲ್ಲ! ಎಂದಿದ್ದಾರೆ.

ಮೇ 13 ರಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸಿಎಂ ನಿವಾಸಕ್ಕೆ ತೆರಳಿದ್ದ ವೇಳೆ ಅವರ ಆಪ್ತ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಲಿವಾಲ್ ಆರೋಪಿಸಿದ್ದಾರೆ.

ಸ್ವಾತಿ ಮಲಿವಾಲ್ ಮಾಡಿರುವ ಆರೋಪಗಳನ್ನು ಅಲ್ಲಗಳೆದಿರುವ ಆಮ್ ಆದ್ಮಿ ಪಕ್ಷವು, ಅರವಿಂದ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಬಿಜೆಪಿಯ ಆಜ್ಞೆಯ ಮೇರೆಗೆ ಮಲಿವಾಲ್ ಈ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

10 ವರ್ಷಗಳ ಹಿಂದೆ ಎಎಪಿ ಪ್ರಾರಂಭವಾದಾಗಿನಿಂದಲೂ ಪಕ್ಷದೊಂದಿಗೆ ಇರುವ ಮಲಿವಾಲ್, ನಿರ್ಭಯಾಗೆ ನ್ಯಾಯಕ್ಕಾಗಿ ನಾವೆಲ್ಲರೂ ಬೀದಿಗಿಳಿಯುವ ಸಮಯ ಎದುರಾಗಿತ್ತು. ಅದಾದ 12 ವರ್ಷಗಳ ನಂತರ, ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗಿಸಿ ಆರೋಪಿಯನ್ನು (ಬಿಭವ್ ಕುಮಾರ್) ರಕ್ಷಿಸಲು ಬೀದಿಗಿಳಿದಿದ್ದೇವೆಯೇ? ಅವರು ಮನೀಶ್ ಸಿಸೋಡಿಯಾ ಜಿ ಅವರನ್ನು ಕರೆತರಲು ಇಷ್ಟು ಹೋರಾಟವನ್ನು ತೋರಿಸಬಹುದಿತ್ತು. ಅವರು ಇಲ್ಲಿದ್ದರೆ, ಬಹುಶಃ ನನಗೆ ಇಷ್ಟು ಕೆಟ್ಟ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಭವ್ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT