ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ. 
ದೇಶ

ಅರವಿಂದ ಕೇಜ್ರಿವಾಲ್ ನಿವಾಸದಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ದೆಹಲಿ ಪೊಲೀಸರು!

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ ಇಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ತಲುಪಿದ್ದು, ಸಿಸಿಟಿವಿ ಡಿವಿಆರ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ ಇಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ತಲುಪಿದ್ದು, ಸಿಸಿಟಿವಿ ಡಿವಿಆರ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮೇ 13 ರಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸಿಎಂ ನಿವಾಸಕ್ಕೆ ತೆರಳಿದ್ದ ವೇಳೆ ಅವರ ಆಪ್ತ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಲಿವಾಲ್ ಆರೋಪಿಸಿದ್ದಾರೆ. ಮಲಿವಾಲ್ ಮೇಲೆ ಹಲ್ಲೆ ನಡೆಸಿದ ದೃಶ್ಯಾವಳಿಗಳನ್ನು ಪಡೆಯಲು ಪೊಲೀಸರ ತಂಡವು ಸಿಸಿಟಿವಿ ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು.

ಸಿಎಂ ನಿವಾಸದ ಸಿಸಿಟಿವಿ ದೃಶ್ಯಾವಳಿಗಳನ್ನು ತಿರುಚಲಾಗುತ್ತಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಭವ್ ಕುಮಾರ್‌ ಅವರನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ವಿಚಾರಣೆ ವೇಳೆ ಬಿಭವ್ ಕುಮಾರ್ ಅವರು ಸರಿಯಾದ ಉತ್ತರ ನೀಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಲಿವಾಲ್ ಅವರ ದೂರಿನ ನಂತರ ದೆಹಲಿ ಪೊಲೀಸರು ಬಿಭವ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 308, 341, 506 ಮತ್ತು 509 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!