ಪತಂಜಲಿ 
ದೇಶ

Patanjali Soanpapadi case: ಪತಂಜಲಿ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ; ಮೂವರಿಗೆ ಜೈಲು ಶಿಕ್ಷೆ

ಪತಂಜಲಿ ಸಂಸ್ಥೆಯ ಸೋನ್​ಪಾಪ್ಡಿ ಸಿಹಿ ತಿನಿಸು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಡೆಹ್ರಾಡೂನ್: ಪತಂಜಲಿ ಸಂಸ್ಥೆಯ ಸೋನ್​ಪಾಪ್ಡಿ ಸಿಹಿ ತಿನಿಸು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಉತ್ತರಾಖಂಡದ ರುದ್ರಾಪುರದಲ್ಲಿರುವ ಪರೀಕ್ಷಾ ಪ್ರಯೋಗಾಲಯದಲ್ಲಿ ಪತಂಜಲಿಯ ಆಹಾರ ಉತ್ಪನ್ನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪತಂಜಲಿ ಆಯುರ್ವೇದ್ ಲಿಮಿಟೆಡ್‌ನ ಸಹಾಯಕ ಮ್ಯಾನೇಜರ್ ಸೇರಿದಂತೆ ಮೂವರಿಗೆ ಪಿಥೋರಘರ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ದಂಡ ಮತ್ತು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

2019 ರಲ್ಲಿ ಪಿಥೋರಗಢ್‌ನ ಬೆರಿನಾಗ್‌ನಲ್ಲಿರುವ ಮುಖ್ಯ ಮಾರುಕಟ್ಟೆಯಲ್ಲಿರುವ ಲೀಲಾ ಧಾರ್ ಪಾಠಕ್ ಅವರ ಅಂಗಡಿಯಲ್ಲಿ ಆಹಾರ ಸುರಕ್ಷತಾ ನಿರೀಕ್ಷಕರು ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಬಳಿಕ ಪಿಥೋರಗಢದ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಬೆರಿನಾಗ್ ಮಾರುಕಟ್ಟೆಯ ಅಂಗಡಿಯಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು.

ಇದೀಗ ಇದರ ಪರೀಕ್ಷಾ ವರದಿಯಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಿಥೋರಗಢದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ಸಂಜಯ್ ಸಿಂಗ್ ಅವರು ಪತಂಜಲಿ ಫುಡ್ ಅಂಡ್ ಹರ್ಬಲ್ ಪಾರ್ಕ್, ಲಕ್ಸಾರ್‌ನ ಸಹಾಯಕ ಜನರಲ್ ಮ್ಯಾನೇಜರ್ ಅಭಿಷೇಕ್ ಕುಮಾರ್ ಅವರಿಗೆ ಶಿಕ್ಷೆ ವಿಧಿಸಿದರು.

ಅಜಯ್ ಜೋಶಿ, ಕನ್ಹಾ ಜಿ ಡಿಸ್ಟ್ರಿಬ್ಯೂಟರ್ ಪ್ರೈವೇಟ್ ಲಿಮಿಟೆಡ್ ರಾಮನಗರದ ಸಹಾಯಕ ವ್ಯವಸ್ಥಾಪಕ; ಮತ್ತು ಅಂಗಡಿಯವ ಲೀಲಾಧರ್ ಪಾಠಕ್ ಅವರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006 ರ ಸೆಕ್ಷನ್ 59 ರ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು. ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ಅಜಯ್ ಜೋಶಿಗೆ ತಲಾ 10,000 ರೂ. ದಂಡ ವಿಧಿಸಿದರೆ, ಅಭಿಷೇಕ್ ಕುಮಾರ್ 25,000 ರೂ. ಮತ್ತು ಪಾಠಕ್ 5,000 ರೂ. ದಂಡ ವಿಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT