8 ಬಾರಿ ಮತ ಚಲಾಯಿಸಿದ ಯುವಕ 
ದೇಶ

ಫರೂಕಾಬಾದ್‌: ಬಿಜೆಪಿಗೆ 8 ಬಾರಿ ಮತ ಚಲಾಯಿಸಿದ ಯುವಕ, FIR ದಾಖಲು

ಉತ್ತರಪ್ರದೇಶದ ಫರೂಖಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಯುವಕನೋರ್ವ ಬಿಜೆಪಿಗೆ 8 ಬಾರಿ ಮತ ಹಾಕುವುದನ್ನು ತೋರಿಸುವ ವೀಡಿಯೊ ವೈರಲ್ ಆದ ಬಳಿಕ ಪ್ರತಿಪಕ್ಷ ಆತನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಲಕ್ನೋ : ಉತ್ತರಪ್ರದೇಶದ ಫರೂಖಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಯುವಕನೋರ್ವ ಬಿಜೆಪಿಗೆ 8 ಬಾರಿ ಮತ ಹಾಕುವುದನ್ನು ತೋರಿಸುವ ವೀಡಿಯೊ ವೈರಲ್ ಆದ ಬಳಿಕ ಪ್ರತಿಪಕ್ಷ ಆತನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಿರಂತರ ಹಲವು ಬಾರಿ ಮತ ಚಲಾಯಿಸುತ್ತಿರುವಾಗ ವೀಡಿಯೊ ರೆಕಾರ್ಡ್ ಮಾಡಿಕೊಂಡಿದ್ದು, ಆ ವೀಡಿಯೊವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಾಮಾಜಿಕ ಮಾಧ್ಯಮದ ವೇದಿಕೆ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಉತ್ತರಪ್ರದೇಶದ ಇಟಾಹ್ ಜಿಲ್ಲೆಯ ಖಿರಿ ಪಮರಾನ್ ಗ್ರಾಮದಲ್ಲಿ ರೆಕಾರ್ಡ್ ಆಗಿದೆ. ಈ ಗ್ರಾಮ ಫರೂಖಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಲಿಗಂಜ್ ವಿಧಾನ ಸಭಾ ಕ್ಷೇತ್ರದ ಭಾಗ. ಈ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮುಖೇಶ್ ರಜಪೂತ್ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿವಿಧ ಸರ್ಕಾರಿ ಗುರುತಿನ ಚೀಟಿಗಳೊಂದಿಗೆ ಬ್ಯಾಲೆಟ್ ಯೂನಿಟ್‌ನಲ್ಲಿರುವ ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರ ಫೋಟೋದ ಮುಂದೆ ಬಟನ್ ಅನ್ನು ಒತ್ತುವ ಮೂಲಕ ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅಪರಿಚಿತ ಯುವಕ ಹಲವು ಬಾರಿ ಮತದಾನ ಮಾಡುವಾಗ ಕನಿಷ್ಠ ಎರಡು ಬಾರಿ ಶರ್ಟ್ ಬದಲಾಯಿಸಿರುವುದು ವೀಡಿಯೊ ತೋರಿಸುತ್ತದೆ.

ಮುಖೇಶ್ ರಜಪೂತ್ ಫರೂಕಾಬಾದ್‌ನ ಬಿಜೆಪಿ ಅಭ್ಯರ್ಥಿ. ಮೇ 13 ರಂದು ನಾಲ್ಕನೇ ಹಂತದ ಸಾರ್ವತ್ರಿಕ ಚುನಾವಣೆಗಳಲ್ಲಿ ಫರೂಕಾಬಾದ್ ಕ್ಷೇತ್ರದಲ್ಲಿ ಮತದಾನ ನಡೆಯಿತು. ಈ ಸಂಬಂಧ ಎಟಾ ಜಿಲ್ಲೆಯ ನಯಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಹೇಳಿದ್ದಾರೆ. ಆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮತಗಟ್ಟೆ ಅಧಿಕಾರಿಯನ್ನು ಅಮಾನತು ಮಾಡಲು ಆದೇಶಿಸಲಾಗಿದೆ. ಆ ಮತಗಟ್ಟೆಯಲ್ಲಿ ಮರುಮತದಾನಕ್ಕೂ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ವಿಡಿಯೊ ನೋಡಿದರೆ ತಮ್ಮ ಸೋಲಿನಿಂದ ತಪ್ಪಿಸಿಕೊಳ್ಳಲು ಬಿಜೆಪಿ, ಜನರ ನಿರ್ಣಯವನ್ನು ಬದಿಗೊತ್ತಿ ಆಡಳಿತ ಯಂತ್ರದ ಮೇಲೆ ಒತ್ತಡ ಹಾಕಿ ಪ್ರಜಾಪ್ರಭುತ್ವದ ಲೂಟಿಗೆ ಮುಂದಾಗಿದೆ ಎಂದು ರಾಹುಲ್ ಕಿಡಿ ಕಾರಿದ್ದಾರೆ. ಆಡಳಿತದಲ್ಲಿರುವವರ ಒತ್ತಡಕ್ಕೆ ಮಣಿಯದೇ ಚುನಾವಣೆ ಸಿಬ್ಬಂದಿ ತಮ್ಮ ಸಾಂವಿಧಾನಿಕ ಕರ್ತವ್ಯ ಅರಿತು ಕೆಲಸ ಮಾಡುತ್ತಾರೆ ಎಂದು ಕಾಂಗ್ರೆಸ್ ನಂಬಿದೆ. ಇಲ್ಲವಾದರೆ, ‘ಇಂಡಿಯಾ’ ಅಧಿಕಾರಕ್ಕೆ ಬಂದ ಕೂಡಲೇ ಕರ್ತವ್ಯ ಲೋಪ ಎಸಗಿದವವರ ವಿರುದ್ಧ ಕ್ರಮ ಆಗುತ್ತದೆ. ಸಾಂವಿಧಾನಿಕ ಪ್ರತಿಜ್ಞೆ ಉಲ್ಲಂಘಿಸುವ ಮುನ್ನ 10 ಬಾರಿ ಯೋಚಿಸಿ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT