ಸಾಂಕೇತಿಕ ಚಿತ್ರ online desk
ದೇಶ

ಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿನಿಂದ ಮಗು ಸಾವು!

ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ ಆರೋಗ್ಯ ಸಮಸ್ಯೆಯಿಂದ ಮಗುವೊಂದು ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವರದಿಯಾಗಿದೆ.

ತಿರುವನಂತಪುರಂ: ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ ಆರೋಗ್ಯ ಸಮಸ್ಯೆಯಿಂದ ಮಗುವೊಂದು ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವರದಿಯಾಗಿದೆ. ಕಲುಶಿತ ನೀರಿನಲ್ಲಿ ಪತ್ತೆಯಾದ ಅಮೀಬಾದಿಂದ ಉಂಟಾದ ಸೋಂಕಿನಿಂದ ಮಗು ಸಾವನ್ನಪ್ಪಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಅಮೀಬಾವನ್ನು ಮೆದುಳು ತಿನ್ನುವ ಅಮೀಬಾ ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ.

ಮೂನ್ನಿಯೂರು ಪಂಚಾಯತ್ ನಲ್ಲಿ ಈ ಘಟನೆ ವರದಿಯಾಗಿದ್ದು, ಮಗುವನ್ನು ಕೋಝಿಕ್ಕೋಡ್ ಮೆಡಿಕಲ್ ಕಾಲೇಜ್ ಇನ್ಸ್ಟಿಟ್ಯೂಟ್ ಆಫ್ ಮೆಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಳೆದ 1 ವಾರದಿಂದ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ವೈದ್ಯಕೀಯ ತಜ್ಞರ ಪ್ರಕಾರ, ಸ್ವತಂತ್ರವಾಗಿ ವಾಸಿಸುವ, ಪರಾವಲಂಬಿಯಲ್ಲದ ಅಮೀಬಾ ಬ್ಯಾಕ್ಟೀರಿಯಾಗಳು ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸಿದಾಗ ಸೋಂಕು ಉಂಟಾಗುತ್ತದೆ. ಬಾಲಕಿ ಮೇ 1 ರಂದು ಸಮೀಪದ ಕೊಳದಲ್ಲಿ ಸ್ನಾನ ಮಾಡಿದ್ದಳು ಮತ್ತು ಮೇ 10 ರ ವೇಳೆಗೆ ಜ್ವರ, ತಲೆನೋವು ಮತ್ತು ವಾಂತಿಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಮೂಲಗಳು ತಿಳಿಸಿವೆ. ಮಗು ವೆಂಟಿಲೇಟರ್‌ ನಲ್ಲಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಅದೇ ಕೊಳದಲ್ಲಿ ಬಾಲಕಿಯೊಂದಿಗೆ ಸ್ನಾನ ಮಾಡಿದ ಇತರ ಮಕ್ಕಳ ಮೇಲೆಯೂ ನಿಗಾ ವಹಿಸಲಾಗಿದೆ. ಆದಾಗ್ಯೂ, ಸೋಂಕು ಮುಕ್ತವಾಗಿರುವುದು ಕಂಡುಬಂದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಆರೋಗ್ಯ ಸಮಸ್ಯೆ ಮೊದಲು 2023 ಮತ್ತು 2017 ರಲ್ಲಿ ರಾಜ್ಯದ ಕರಾವಳಿ ಅಲಪ್ಪುಳ ಜಿಲ್ಲೆಯಲ್ಲಿ ವರದಿಯಾಗಿತ್ತು. ಜ್ವರ, ತಲೆನೋವು, ವಾಂತಿ ಮತ್ತು ರೋಗಗ್ರಸ್ತವಾಗುವಿಕೆಗಳು ರೋಗದ ಮುಖ್ಯ ಲಕ್ಷಣಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT