ಕಾವೇರಿ ನೀರು  
ದೇಶ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ Cauvery Water Management Authority ನಿರ್ದೇಶನ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ.

ನವದೆಹಲಿ: ತಮಿಳು ನಾಡಿಗೆ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority) ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.

ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಅಣೆಕಟ್ಟು ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ. ಇದೀಗ ಮುಂಗಾರು ಪೂರ್ವದಲ್ಲಿ ಆದೇಶ ಹೊರಬಿದ್ದಿದೆ.

ತಮಿಳು ನಾಡು ವಾದ: ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಕರ್ನಾಟಕದ ಅಗತ್ಯತೆಗಳಿಗೆ ಸದ್ಯ 4 ಟಿಎಂಸಿ ನೀರು ಸಾಕು. ಮುಖ್ಯ ಅಣೆಕಟ್ಟುಗಳಲ್ಲಿ 19.17 ಟಿಎಂಸಿ ನೀರಿದೆ. ಹೀಗಾಗಿ ಕರ್ನಾಟಕ ತಮಿಳು ನಾಡಿಗೆ ನೀರು ಹರಿಸಬೇಕು. ನೀರು ಬಿಡಲು ಅವರಿಗೆ ಯಾವುದೇ ತೊಂದರೆ ಇಲ್ಲ. ಈ ವರ್ಷ ಸಾಕಷ್ಟು ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯಕ್ಕೆ ಆರು ಟಿಎಂಸಿ ನೀರನ್ನು ತಕ್ಷಣವೇ ಬಿಡಬೇಕು ಎಂದು ತಮಿಳು ನಾಡು ಸಿಡಬ್ಲ್ಯುಎಂಎ ಸಭೆಯಲ್ಲಿ ವಾದ ಮಂಡಿಸಿತ್ತು.

ಕರ್ನಾಟಕದ ವಾದವೇನು?: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಜಲಾಶಯಗಳಲ್ಲಿ ನೀರಿಲ್ಲದೆ ಬರಿದಾಗಿದ್ದು, ಕುಡಿಯುವ ನೀರಿಗೆ ನಮ್ಮಲ್ಲಿನ ನೀರು ಸಾಕಾಗುತ್ತಿಲ್ಲ. ಇರುವ ನೀರನ್ನು ಸಂಪೂರ್ಣ ಬಳಸಿಕೊಳ್ಳಲು ಆಗುವುದಿಲ್ಲ, ಮುಂಗಾರು ಸಾಮಾನ್ಯವಾಗಿದ್ದರೆ ಮಾತ್ರ ನೀರು ಬಿಡಬಹುದು. ಇಲ್ಲದಿದ್ದರೆ ನೀರು ಬಿಡುವುದಕ್ಕೆ ಸಾಧ್ಯವೆ ಇಲ್ಲ ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ಕರ್ನಾಟಕ ವಾದ ಮಂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!