ಕಾವೇರಿ ನೀರು  
ದೇಶ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ Cauvery Water Management Authority ನಿರ್ದೇಶನ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ.

ನವದೆಹಲಿ: ತಮಿಳು ನಾಡಿಗೆ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority) ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.

ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಅಣೆಕಟ್ಟು ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ. ಇದೀಗ ಮುಂಗಾರು ಪೂರ್ವದಲ್ಲಿ ಆದೇಶ ಹೊರಬಿದ್ದಿದೆ.

ತಮಿಳು ನಾಡು ವಾದ: ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಕರ್ನಾಟಕದ ಅಗತ್ಯತೆಗಳಿಗೆ ಸದ್ಯ 4 ಟಿಎಂಸಿ ನೀರು ಸಾಕು. ಮುಖ್ಯ ಅಣೆಕಟ್ಟುಗಳಲ್ಲಿ 19.17 ಟಿಎಂಸಿ ನೀರಿದೆ. ಹೀಗಾಗಿ ಕರ್ನಾಟಕ ತಮಿಳು ನಾಡಿಗೆ ನೀರು ಹರಿಸಬೇಕು. ನೀರು ಬಿಡಲು ಅವರಿಗೆ ಯಾವುದೇ ತೊಂದರೆ ಇಲ್ಲ. ಈ ವರ್ಷ ಸಾಕಷ್ಟು ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯಕ್ಕೆ ಆರು ಟಿಎಂಸಿ ನೀರನ್ನು ತಕ್ಷಣವೇ ಬಿಡಬೇಕು ಎಂದು ತಮಿಳು ನಾಡು ಸಿಡಬ್ಲ್ಯುಎಂಎ ಸಭೆಯಲ್ಲಿ ವಾದ ಮಂಡಿಸಿತ್ತು.

ಕರ್ನಾಟಕದ ವಾದವೇನು?: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಜಲಾಶಯಗಳಲ್ಲಿ ನೀರಿಲ್ಲದೆ ಬರಿದಾಗಿದ್ದು, ಕುಡಿಯುವ ನೀರಿಗೆ ನಮ್ಮಲ್ಲಿನ ನೀರು ಸಾಕಾಗುತ್ತಿಲ್ಲ. ಇರುವ ನೀರನ್ನು ಸಂಪೂರ್ಣ ಬಳಸಿಕೊಳ್ಳಲು ಆಗುವುದಿಲ್ಲ, ಮುಂಗಾರು ಸಾಮಾನ್ಯವಾಗಿದ್ದರೆ ಮಾತ್ರ ನೀರು ಬಿಡಬಹುದು. ಇಲ್ಲದಿದ್ದರೆ ನೀರು ಬಿಡುವುದಕ್ಕೆ ಸಾಧ್ಯವೆ ಇಲ್ಲ ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ಕರ್ನಾಟಕ ವಾದ ಮಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT