ದೇಶ

ಅಂಬೇಡ್ಕರ್ ಇಲ್ಲದಿರುತ್ತಿದ್ದರೆ SC-ST ಗಳಿಗೆ ಮೀಸಲಾತಿ ನೀಡಲು ನೆಹರೂ ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ

ಡಾ ಬಿ ಆರ್ ಅಂಬೇಡ್ಕರ್ ಅವರು ಇಲ್ಲದಿರುತ್ತಿದ್ದರೆ ನೆಹರೂ ಅವರು ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಗೆ ಅವಕಾಶ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬಿಹಾರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳಿಂದ(SC, ST and OBCs) ಮೀಸಲಾತಿಯನ್ನು ಕಸಿದುಕೊಂಡು, ವೋಟ್ ಜಿಹಾದ್‌ನಲ್ಲಿ ತೊಡಗಿರುವವರಿಗೆ ಅದನ್ನು ಒಪ್ಪಿಸಲು ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಡಾ ಬಿ ಆರ್ ಅಂಬೇಡ್ಕರ್ ಅವರು ಇಲ್ಲದಿರುತ್ತಿದ್ದರೆ ನೆಹರೂ ಅವರು ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಗೆ ಅವಕಾಶ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬಿಹಾರದ ಪೂರ್ವ ಚಂಪಾರಣ್ ಲೋಕಸಭಾ ಕ್ಷೇತ್ರದಲ್ಲಿ ಅವರು ಇಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಇಂಡಿಯಾ ಒಕ್ಕೂಟ ಭ್ರಷ್ಟಾಚಾರ, ತುಷ್ಟೀಕರಣ ರಾಜಕೀಯ ಮತ್ತು "ವಿಕೃತ ಸನಾತನ ವಿರೋಧಿ ಮನಸ್ಥಿತಿ"ಯನ್ನು ಹೊಂದಿದೆ, ಜೂನ್ 4 ರ ಚುನಾವಣಾ ಫಲಿತಾಂಶ ಪ್ರಕಟ ನಂತರ ಇವೆಲ್ಲಕ್ಕೂ ದೊಡ್ಡ ಹೊಡೆತ ಬೀಳಲಿದೆ ಎಂದರು.

ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರಂತಹ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ಮೋದಿ, ಅವರೆಲ್ಲಾ ಬೆಳ್ಳಿ ಚಮಚ ಬಾಯಲ್ಲಿಟ್ಟುಕೊಂಡು ಹುಟ್ಟಿದವರು ಎಂದರು.

ಭ್ರಷ್ಟಾಚಾರ, ತುಷ್ಟೀಕರಣ ರಾಜಕೀಯದ ಪರವಾಗಿ ನಿಂತಿರುವ ಇಂಡಿಯಾ ಒಕ್ಕೂಟದ ಕೆಟ್ಟ ಕೆಲಸಗಳು ಈ ರಾಷ್ಟ್ರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ, ಇದು 'ತುಕ್ಡೆ-ತುಕ್ಡೆ' ಗ್ಯಾಂಗ್ ಮತ್ತು ಸನಾತನ ಧರ್ಮವನ್ನು ಧಿಕ್ಕರಿಸುವ ವಿಕೃತ ಮನಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದರು.

ಮೊದಲ ಹಂತದ ಚುನಾವಣೆಯಲ್ಲೇ ಇಂಡಿಯಾ ಒಕ್ಕೂಟ ದಣಿದು ಹೋಗಿತ್ತು. ನಂತರದ ಹಂತಗಳಲ್ಲಿ ಸೋಲು ಕಂಡಿತ್ತು. ಉಳಿದ ಎರಡು ಹಂತಗಳಲ್ಲಿ ಇದೇ ಟ್ರೆಂಡ್‌ ಮುಂದುವರಿಯಲಿದ್ದು, ಜೂನ್‌ 4ರಂದು ಫಲಿತಾಂಶ ಹೊರಬಿದ್ದ ಮೇಲೆ ಪ್ರತಿಪಕ್ಷಗಳ ಮೈತ್ರಿಯ ಉದ್ದೇಶಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT