ಕೇಂದ್ರ ಗೃಹ ಸಚಿವ ಅಮಿತ್ ಶಾ PTI
ದೇಶ

5ನೇ ಹಂತದ ಲೋಕಸಭಾ ಚುನಾವಣೆ: ಈಗಾಗಲೇ ಏಕಾಂಗಿಯಾಗಿ ಬಿಜೆಪಿ 310 ಸ್ಥಾನ ಗೆದ್ದಿದೆ- ಅಮಿತ್ ಶಾ

ಲೋಕಸಭೆ ಚುನಾವಣೆಯ ಐದು ಹಂತಗಳು ಪೂರ್ಣಗೊಂಡ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 310 ಸ್ಥಾನಗಳನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಐದು ಹಂತಗಳು ಪೂರ್ಣಗೊಂಡ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 310 ಸ್ಥಾನಗಳನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಒಡಿಶಾದಲ್ಲಿ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯವನ್ನು 'ಬಾಬು-ರಾಜ್' ನಿಂದ ಮುಕ್ತಗೊಳಿಸುವಂತೆ ಒಡಿಶಾದ ಜನರಿಗೆ ಕರೆ ನೀಡಿದ್ದು ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸಂಬಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಈ ಬಾರಿ ಒಡಿಶಾದಲ್ಲಿ ಬಿಜೆಪಿಯ ಚುನಾವಣಾ ಚಿಹ್ನೆ 'ಕಮಲ' ಅರಳಲಿದೆ ಎಂದರು. ರಾಜ್ಯದಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಒಡಿಶಾದ ಸಂಬಲ್ಪುರ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಐದನೇ ಹಂತದ ಮತದಾನದ ನಂತರ ಬಿಜೆಪಿ ಈಗಾಗಲೇ 310 ಸ್ಥಾನಗಳನ್ನು ಪಡೆದುಕೊಂಡಿದೆ. ಆರು ಮತ್ತು ಏಳನೇ ಸುತ್ತಿನ ಮತದಾನದ ನಂತರ ನಮಗೆ 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ. ಈ ಚುನಾವಣೆಯು ರಾಜ್ಯದಲ್ಲಿ ಪ್ರಸ್ತುತ 'ಬಾಬು ರಾಜ್' ಅನ್ನು ಕೊನೆಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿನ ಬಿಜು ಜನತಾ ದಳ (ಬಿಜೆಡಿ) ಸರ್ಕಾರವು ಒಡಿಶಾದ ಹೆಮ್ಮೆ, ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಅವಮಾನಿಸಿದೆ ಎಂದು ಶಾ ಆರೋಪಿಸಿದರು. ಜಗನ್ನಾಥ ದೇವಾಲಯವನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಬಿಜೆಡಿ ಸರ್ಕಾರ ಬಯಸಿದೆ. ಮಠಗಳು ಮತ್ತು ದೇವಾಲಯಗಳನ್ನು ನಾಶಪಡಿಸಲಾಗಿದೆ ಮತ್ತು ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಇನ್ನೂ ಸಾರ್ವಜನಿಕರಿಗೆ ತೆರೆಯಲಾಗಿಲ್ಲ ಎಂದು ಆರೋಪಿಸಿದರು.

'ಅಧಿಕಾರಿ ರಾಜ್' ಹೇರುವ ಮೂಲಕ ನವೀನ್ ಬಾಬು ಒಡಿಶಾದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!