ಕಾಂಗ್ರೆಸ್‌, ಬಿಜೆಪಿ ಪಕ್ಷದ ಬಾವುಟಗಳು 
ದೇಶ

ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು

ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಚುನಾವಣೆಗೆ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಚುನಾವಣಾ ಆಯೋಗ, ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬುಧವಾರ ತಾಕೀತು ಮಾಡಿದೆ.

ನವದೆಹಲಿ: ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಚುನಾವಣೆಗೆ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಚುನಾವಣಾ ಆಯೋಗ, ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬುಧವಾರ ತಾಕೀತು ಮಾಡಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಭಜಕ ಭಾಷಣ ಮಾಡಿದ್ದಾರೆ ಎಂಬ ವಿರೋಧ ಪಕ್ಷದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ನೋಟಿಸ್ ನೀಡಿದ ಸುಮಾರು ಒಂದು ತಿಂಗಳ ನಂತರ, ಚುನಾವಣಾ ಕಾವಲು ಪಡೆ ಅವರ ಸಮರ್ಥನೆಯನ್ನು ತಿರಸ್ಕರಿಸಿತು ಮತ್ತು ಅವರು ಮತ್ತು ಅವರ ಪಕ್ಷದ ಸ್ಟಾರ್ ಪ್ರಚಾರಕರು ಧಾರ್ಮಿಕ ಮತ್ತು ಕೋಮುವಾದದ ಮಾರ್ಗದ ಪ್ರಚಾರದಿಂದ ದೂರವಿರುವಂತೆ ಹೇಳಿತು.

ಸಮಾಜವನ್ನು ವಿಭಜನೆಯಂತಹ ಪ್ರಚಾರ ಭಾಷಣಗಳನ್ನು ನಿಲ್ಲಿಸುವಂತೆ ಬಿಜೆಪಿಯನ್ನು ಕೇಳಿದೆ. ನಡ್ಡಾ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ನೋಟಿಸ್ ನೀಡಿದ್ದ ಆಯೋಗ, ರಾಹುಲ್ ಗಾಂಧಿ ಹಾಗೂ ನೀವು ನೀಡಿರುವ ಹೇಳಿಕೆ, ಟೀಕೆಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬಿಜೆಪಿ ಸಲ್ಲಿಸಿರುವ ದೂರುಗಳಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿತ್ತು. ಅವರ ಸಮರ್ಥನೆಯನ್ನು ಕೂಡಾ ತಿರಸ್ಕರಿಸಿದ ಆಯೋಗ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸದಂತೆ ಮತ್ತು ಸಶಸ್ತ್ರ ಪಡೆಗಳ ಸಾಮಾಜಿಕ-ಆರ್ಥಿಕ ಸಂಯೋಜನೆಯ ಬಗ್ಗೆ ಸಂಭಾವ್ಯ ವಿಭಜಕ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಗೆ ಸಲಹೆ ನೀಡಿತು

ಕಾಂಗ್ರೆಸ್ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಸಂವಿಧಾನವನ್ನು ರದ್ದುಗೊಳಿಸಬಹುದು ಅಥವಾ ಮಾರಾಟ ಮಾಡಬಹುದು ಎಂಬ ತಪ್ಪು ಅಭಿಪ್ರಾಯ ನೀಡುವ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಅದು ಕಾಂಗ್ರೆಸ್‌ಗೆ ಕೇಳಿದೆ. ಎರಡು ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ತಮ್ಮ ಸ್ಟಾರ್ ಪ್ರಚಾರಕರಿಗೆ ತಮ್ಮ ಭಾಷಣವನ್ನು ಸರಿಪಡಿಸಲು, ಕಾಳಜಿ ವಹಿಸಲು ಮತ್ತು ಸಜ್ಜನಿಕೆಯನ್ನು ಕಾಪಾಡಿಕೊಳ್ಳಲು ಔಪಚಾರಿಕ ಟಿಪ್ಪಣಿ ನೀಡುವಂತೆ ಚುನಾವಣಾ ಆಯೋಗ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ