ರಾಹುಲ್ ಗಾಂಧಿ 
ದೇಶ

INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ರದ್ದು: ರಾಹುಲ್ ಗಾಂಧಿ

ಈ ಬಾರಿ INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಚಂಡೀಗಢ: ಈ ಬಾರಿ INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಹರಿಯಾಣದ ಮಹೇಂದ್ರಗಢ-ಭಿವಾನಿ ಲೋಕಸಭಾ ಕ್ಷೇತ್ರದಲ್ಲಿ ನಡೆದ ತಮ್ಮ ಮೊದಲ ಚುನಾವಣಾ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಗ್ನಿವೀರ್ ಯೋಜನೆ ಇದು ಮೋದಿಯ ಯೋಜನೆ, ಸೇನೆಯ ಯೋಜನೆ ಅಲ್ಲ. ಸೇನೆಗೆ ಇದು ಬೇಕಾಗಿಲ್ಲ. ಈ ಯೋಜನೆಯನ್ನು ಪಿಎಂಒ (ಪ್ರಧಾನಿ ಕಚೇರಿ) ರೂಪಿಸಿದೆ. INDIA ಬಣ ಅಧಿಕಾರಕ್ಕೆ ಬಂದರೆ ' ಅಗ್ನಿವೀರ್ ಯೋಜನೆಯನ್ನು ಕಸದ ಬುಟ್ಟಿಯಲ್ಲಿ ಹಾಕುತ್ತೇವೆ. ಭಾರತದ ಗಡಿಗಳು ಹರಿಯಾಣ ಮತ್ತು ದೇಶದ ಯುವಕರಿಂದ ಸುರಕ್ಷಿತವಾಗಿದೆ.ನಮ್ಮ ಯುವಕರ ಡಿಎನ್‌ಎಯಲ್ಲಿ ದೇಶಪ್ರೇಮವಿದೆ ಎಂದ ಅವರು, ಮೋದಿ ಹಿಂದೂಸ್ತಾನ್ ಕೆ ಜವಾನರನ್ನು ಕಾರ್ಮಿಕರನ್ನಾಗಿ ಪರಿವರ್ತಿಸಿದ್ದಾರೆ ಎಂದರು.

ಮೋದಿ ಸರ್ಕಾರ 22 ಉನ್ನತ ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡುತ್ತದೆ. ಆದರೆ "ರೈತರ ಸಾಲವನ್ನು ಮನ್ನಾ ಮಾಡುವುದಿಲ್ಲ ಏಕೆಂದರೆ ಅದು ಅವರನ್ನು ಹಾಳುಮಾಡುತ್ತದೆ" ಎಂದು ಬಹಿರಂಗವಾಗಿ ಹೇಳುತ್ತಾರೆ

ರೈತರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ಪರಿಹಾರವನ್ನು ನೀಡಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಭೂಸ್ವಾಧೀನ ಮಸೂದೆಯನ್ನು ಮೋದಿ ಸರ್ಕಾರ ಅದನ್ನು ರದ್ದುಗೊಳಿಸಿತು. ಅವರು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಬೀದಿಗಿಳಿಯಬೇಕಾಯಿತು" ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT