ಅತಿಶಿ 
ದೇಶ

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ

ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದ್ದು, ಅದರ ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಬುಧವಾರ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಹರಿಯಾಣ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ನವದೆಹಲಿ: ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದ್ದು, ಅದರ ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಬುಧವಾರ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಹರಿಯಾಣ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಲಸಚಿವರೂ ಆಗಿರುವ ಅತಿಶಿ, ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದಲೂ ಬಿಜೆಪಿ ಎಎಪಿಯನ್ನು ಗುರಿಯಾಗಿಸಲು ಷಡ್ಯಂತ್ರಗಳನ್ನು ರೂಪಿಸುತ್ತಿದೆ.“ಲೋಕಸಭಾ ಚುನಾವಣೆ ಘೋಷಣೆಯಾದ ಐದು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಎಪಿ ಚುನಾವಣೆಯಲ್ಲಿ ಪ್ರಚಾರ ಮಾಡಲು ಸಾಧ್ಯವಾಗದಂತೆ ಬಂಧಿಸಲಾಯಿತು. ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಬಂದ ನಂತರ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ಬಳಸಿಕೊಂಡು ಅವರನ್ನು ಬಂಧಿಸಲು ಪ್ರಯತ್ನಿಸಿದರು ಆದರೆ ಆ ಯೋಜನೆಯು ಕಾರ್ಯರೂಪಕ್ಕೆ ಬರಲಿಲ್ಲ. ಈಗ ಅವರ ಹರಿಯಾಣ ಸರ್ಕಾರದ ಮೂಲಕ ಬಿಜೆಪಿಯು ದೆಹಲಿಗೆ ಯಮುನಾ ನೀರು ಪೂರೈಕೆಯನ್ನು ನಿಲ್ಲಿಸಿದೆ ಎಂದು ಹೇಳಿದರು.

ಇಂತಹ ಸಮಸ್ಯೆಗಳು ಹಿಂದೆಂದೂ ಉದ್ಭವಿಸದ ಪ್ರದೇಶಗಳಿಂದಲೂ ನೀರಿನ ಕೊರತೆಯ ದೂರುಗಳನ್ನು ಸ್ವೀಕರಿಸಲು ಪ್ರಾರಂಭಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಬುಧವಾರವೇ ಹರಿಯಾಣ ಸರ್ಕಾರಕ್ಕೆ ಪತ್ರ ಬರೆಯಲಾಗುವುದು, ಅವರವರ ಕಡೆಯಿಂದ ಯಾವುದೇ ಕ್ರಮವಾಗದಿದ್ದರೆ, ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸುವುದಾಗಿ ಅವರು ತಿಳಿಸಿದರು.

ಎಎಪಿ ಸರ್ಕಾರದ ಪ್ರತಿಷ್ಠೆಗೆ ಕಳಂಕ ಮತ್ತು ದೆಹಲಿ ಜನರಿಗೆ ತೊಂದರೆ ನೀಡಲು ಬಿಜೆಪಿ ಈ ರೀತಿ ಮಾಡಿದೆ. ರಾಜಧಾನಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಅವರು ಬಯಸಿದ್ದು, ಮುಂದಿನ ದಿನಗಳಲ್ಲಿ ಮೇ 25ರವರೆಗೆ ಇಂತಹ ಇನ್ನಷ್ಟು ಘಟನೆಗಳು ನಡೆಯಲಿವೆ ಎಂದು ದೆಹಲಿ ಜನತೆಗೆ ಎಚ್ಚರಿಕೆ ನೀಡಲು ಬಯಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್ ಗೆ ಜಸ್ಟೀಸ್ ಪಾಂಚೋಲಿ ನೇಮಕ: ಕೊಲಿಜಿಯಂ ಶಿಫಾರಸಿಗೆ ನ್ಯಾಯಮೂರ್ತಿ ಬಿ. ವಿ. ನಾಗರತ್ನ ತೀವ್ರ ಅಸಮಾಧಾನ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT