ಪ್ರಧಾನಿ ಮೋದಿ - ರಾಹುಲ್ ಗಾಂಧಿ online desk
ದೇಶ

ಪ್ರಧಾನಿ ಹೇಳುತ್ತಿರುವುದನ್ನು ಸಾಮಾನ್ಯನೋರ್ವ ಹೇಳಿದ್ದರೆ, ಆತನಿಗೆ ಮನೋರೋಗ ಚಿಕಿತ್ಸೆಯೇ ಗತಿ: ಮೋದಿ ವಿರುದ್ಧ ರಾಹುಲ್ ವ್ಯಂಗ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದು, ಪ್ರಧಾನಿ ಹೇಳುತ್ತಿರುವುದನ್ನು ಓರ್ವ ಸಾಮಾನ್ಯ ವ್ಯಕ್ತಿ ಹೇಳಿದ್ದರೆ, ಆತನನ್ನು ನೀವು ಸೀದಾ ಮನೋರೋಗ ಚಿಕಿತ್ಸೆಗೆ ಕರೆದೊಯ್ಯುತ್ತೀರ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದು, ಪ್ರಧಾನಿ ಹೇಳುತ್ತಿರುವುದನ್ನು ಓರ್ವ ಸಾಮಾನ್ಯ ವ್ಯಕ್ತಿ ಹೇಳಿದ್ದರೆ, ಆತನನ್ನು ನೀವು ಸೀದಾ ಮನೋರೋಗ ಚಿಕಿತ್ಸೆಗೆ ಕರೆದೊಯ್ಯುತ್ತೀರ ಎಂದು ಹೇಳಿದ್ದಾರೆ.

ತನ್ನನ್ನು ದೇವರು ಕಳುಹಿಸಿದ್ದಾನೆಂಬ ಪ್ರಧಾನಿ ಮೋದಿ ಪ್ರತಿಪಾದನೆಯನ್ನೂ ಟೀಕಿಸಿರುವ ರಾಹುಲ್ ಗಾಂಧಿ, ಮೋದಿ 22 ಮಂದಿಗಾಗಿ ಕೆಲಸ ಮಾಡುತ್ತಿದ್ದಾರೆ, ಬಡವರಿಗಾಗಿ ಏನನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇತ್ತೀಚಿಗೆ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ನಾನು ಕೇವಲ ಹುಟ್ಟಿಲ್ಲ, ದೇವರು ಆತನ ಕೆಲಸ ಮಾಡುವುದಕ್ಕಾಗಿ ನನ್ನನ್ನು ಕಳಿಸಿರುವುದರಿಂದ ಇಷ್ಟು ಶಕ್ತಿ ತಮಗೆ ಸಿಗುತ್ತಿದೆ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ದೇವರಿಂದ ಕಳಿಸಲ್ಪಟ್ಟ ವ್ಯಕ್ತಿ ಕೇವಲ 22 ಜನರಿಗಾಗಿ ಕೆಲಸ ಮಾಡುತ್ತಿರುವುದು ಅತ್ಯಂತ ವಿಚಿತ್ರ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅಂಬಾನಿ, ಅದಾನಿ ಇಚ್ಛೆಯ ಪ್ರಕಾರ ಎಲ್ಲವನ್ನೂ ಮಾಡುತ್ತಾರೆ. ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣ ಸೇರಿದಂತೆ ದೇಶದ ಎಲ್ಲಾ ಆಸ್ತಿಗಳನ್ನೂ ಅದಾನಿಗೆ ಕೊಡುತ್ತಾರೆ. ಆದರೆ ಬಡವರು ಸಾಲ ಮನ್ನ ಮಾಡಲು ಕೋರಿದರೆ, ರಸ್ತೆ, ಆಸ್ಪತ್ರೆ, ಶಿಕ್ಷಣವನ್ನು ಕೇಳಿದರೆ, ಮೋದಿ ಏನನ್ನೂ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರನ್ನು ಬೆಂಬಲಿಸಿ ಈಶಾನ್ಯ ದೆಹಲಿಯ ದಿಲ್ಶಾದ್ ಗಾರ್ಡನ್‌ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಯಾವಾಗಲೂ ಸಂವಿಧಾನವನ್ನು ಬದಲಾಯಿಸಲು ಬಯಸುತ್ತದೆ ಎಂದು ಪ್ರತಿಪಾದಿಸಿದ್ದು, ಈ ಚುನಾವಣೆ ಸಂವಿಧಾನದ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!