ಚಾರ್ ಧಾಮ್ 
ದೇಶ

ಚಾರ್ ಧಾಮ್ ಯಾತ್ರೆ: ಮೇ 18 ರಿಂದ ಈವರೆಗೂ 50 ಯಾತ್ರಿಕರು ಸಾವು!

ಹಿಮಾಲಯದ ತಪ್ಪಲಿನ ರಾಜ್ಯ ಉತ್ತರಾಖಂಡದಲ್ಲಿ ಸುಮಾರು ಹದಿನೈದು ದಿನಗಳ ಹಿಂದೆ ಮೇ 10 ರಂದು ಆರಂಭವಾದ ಜಾರ್ ಧಾಮ್ ಯಾತ್ರೆಯಲ್ಲಿ ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡ್: ಹಿಮಾಲಯದ ತಪ್ಪಲಿನ ರಾಜ್ಯ ಉತ್ತರಾಖಂಡದಲ್ಲಿ ಸುಮಾರು ಹದಿನೈದು ದಿನಗಳ ಹಿಂದೆ ಮೇ 10 ರಂದು ಆರಂಭವಾದ ಜಾರ್ ಧಾಮ್ ಯಾತ್ರೆಯಲ್ಲಿ ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ, ಇದುವರೆಗೆ 52 ಚಾರ್ ಧಾಮ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಇವರಲ್ಲಿ ಹೆಚ್ಚಿನವರು 60 ವರ್ಷಕ್ಕೂ ಮೇಲ್ಪಟ್ಟವರಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗಂಗೋತ್ರಿಯಲ್ಲಿ ಮೂವರು, ಯಮುನೋತ್ರಿಯಲ್ಲಿ 12, ಬದರಿನಾಥದಲ್ಲಿ 14 ಮತ್ತು ಕೇದಾರನಾಥದಲ್ಲಿ 23 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

50 ವರ್ಷ ಮೇಲ್ಪಟ್ಟ ಭಕ್ತರಿಗೆ ವೈದ್ಯಕೀಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗದಲ್ಲಿ ತಪಾಸಣೆ ಮಾಡಲಾಗುತ್ತಿದೆ. ಯಾತ್ರಾರ್ಥಿಗಳು ವೈದ್ಯಕೀಯವಾಗಿ ಸಾಕಷ್ಟು ಫಿಟ್ ಆಗಿಲ್ಲದಿದ್ದರೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಆದಾಗ್ಯೂ, ಅವರು ಯಾತ್ರೆ ಮುಂದುವರಿಸಲು ಒತ್ತಾಯಿಸಿದರೆ, ಫಾರ್ಮ್ ಭರ್ತಿ ಮಾಡಿದ ನಂತರ ಮುಂದೆ ಹೋಗಲು ಅವರಿಗೆ ಅನುಮತಿಸಲಾಗುತ್ತದೆ ಎಂದರು.

ಚಾರ್‌ಧಾಮ್ ಯಾತ್ರೆಯ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದುವರೆಗೆ ಒಂಬತ್ತು ಲಕ್ಷದ 67 ಸಾವಿರದ 302 ಭಕ್ತರು ಚಾರ್‌ಧಾಮ್‌ಗೆ ಭೇಟಿ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT