ಸುಪ್ರೀಂ ಕೋರ್ಟ್ 
ದೇಶ

ಬೂತ್‌ ಮಟ್ಟದ ಒಟ್ಟು ಮತದಾನದ ಮಾಹಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿ; ಅರ್ಜಿ ತಿರಸ್ಕರಿಸಿದ Supreme Court

ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ.

ಸರ್ಕಾರೇತರ ಸಂಸ್ಥೆ ಅಸೋಸಿಯೇಶನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಿತ್ತು.

ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್‌ ದತ್ತ ಮತ್ತು ಸತೀಶ್‌ ಚಂದ್ರ ಶರ್ಮಾ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠ, ''ಸುಪ್ರೀಂ ಕೋರ್ಟ್‌ಗೆ 2019ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಯಲ್ಲಿನ ಪ್ರಧಾನ ಕೋರಿಕೆಯೇ ಹಾಲಿ ಅರ್ಜಿಯ ಮಧ್ಯಂತರ ಕೋರಿಕೆಯಾಗಿದೆ ಎಂದು ಹೇಳಿ ಅರ್ಜಿ ಸಂಬಂಧ ಆದೇಶ ಮಾಡಲು ನಿರಾಕರಿಸಿದೆ.

“2019ರ ಅರ್ಜಿಯ ʼಬಿʼ ಕೋರಿಕೆ ಮತ್ತು 2924ರ ಹಾಲಿ ಮಧ್ಯಂತರ ಅರ್ಜಿಯ ʼಎʼ ಕೋರಿಕೆ ನೋಡಿ… ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವು ನಿಮ್ಮತ್ತ ಮುಖ ನೆಟ್ಟಿದ್ದು ಹೀಗೆ ಮಾಡುವಂತಿಲ್ಲ ಎಂದು ಹೇಳುತ್ತದೆ. 1985ರ ತೀರ್ಪಿನ ಪ್ರಕಾರ ವಿಶೇಷ ಸಂದರ್ಭದಲ್ಲಿ ಹಾಗೆ ಮಾಡಬಹುದು ಎನ್ನಲಾಗಿದೆ. ಈ ಪ್ರಕರಣದಲ್ಲಿ ಮಾರ್ಚ್‌ 16ರಂದು ನೀವೇಕೆ ಅರ್ಜಿ ಸಲ್ಲಿಸಲಿಲ್ಲ” ಎಂದು ಪೀಠ ಪ್ರಶ್ನಿಸಿದೆ.

ಇದಕ್ಕೆ ಎಡಿಆರ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ದುಷ್ಯಂತ್‌ ದವೆ ಅವರು ಪ್ರತಿಕ್ರಿಯಿಸಿ, “ಚುನಾವಣಾ ಆಯೋಗ ಮಾಹಿತಿ ಬಹಿರಂಗಪಡಿಸಿದ ಬಳಿಕ ಮಾತ್ರವೇ ನಾವು ಅರ್ಜಿ ಸಲ್ಲಿಸಬಹುದಿತ್ತು" ಎಂದರು. ಆದಾಗ್ಯೂ, ನ್ಯಾಯಾಲಯವು ಮಧ್ಯಂತರ ಆದೇಶ ಮಾಡಲು ನಿರಾಕರಿಸಿತು.

“2019ರ ಅರ್ಜಿಯ ʼಬಿʼ ಕೋರಿಕೆ ಮತ್ತು ಹಾಲಿ ಮಧ್ಯಂತರ ಅರ್ಜಿಯ ʼಎʼ ಕೋರಿಕೆಯು ಮೇಲ್ನೋಟಕ್ಕೆ ಒಂದೇ ರೀತಿ ಇರುವುದರಿಂದ ನಾವು ಮಧ್ಯಂತರ ಆದೇಶ ಮಾಡುವ ಉದ್ದೇಶ ಹೊಂದಿಲ್ಲ. ಬೇಸಿಗೆ ರಜೆ ಬಳಿಕ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕು" ಎಂದು ನ್ಯಾಯಾಲಯ ಆದೇಶಿಸಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳ ಒಳಗೆ ಎಲ್ಲಾ ಮತಗಟ್ಟೆಗಳಲ್ಲಿನ ಮತದಾನದ ಅಂತಿಮ ದೃಢೀಕೃತ ದತ್ತಾಂಶ ಹಾಗೂ ಚಲಾವಣೆಯಾದ ಒಟ್ಟು ಮತಗಳನ್ನು ಬಹಿರಂಗ ಪಡಿಸಲು ಕೋರಿ ಸರ್ಕಾರೇತರ ಸಂಸ್ಥೆ ಎಡಿಆರ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಪ್ರಮಾಣೀಕೃತ ಮತದಾನ ದತ್ತಾಂಶ ಪ್ರಕಟಿಸುವ ಸಂಬಂಧ ಯಾವುದೇ ಕಾನೂನಾತ್ಮಕ ಹಕ್ಕನ್ನು ಚಲಾಯಿಸಲಾಗದು ಎಂದು ಬುಧವಾರವಷ್ಟೇ ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT