ಸುಪ್ರೀಂ ಕೋರ್ಟ್ 
ದೇಶ

ಬೂತ್‌ ಮಟ್ಟದ ಒಟ್ಟು ಮತದಾನದ ಮಾಹಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿ; ಅರ್ಜಿ ತಿರಸ್ಕರಿಸಿದ Supreme Court

ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ.

ಸರ್ಕಾರೇತರ ಸಂಸ್ಥೆ ಅಸೋಸಿಯೇಶನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಿತ್ತು.

ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್‌ ದತ್ತ ಮತ್ತು ಸತೀಶ್‌ ಚಂದ್ರ ಶರ್ಮಾ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠ, ''ಸುಪ್ರೀಂ ಕೋರ್ಟ್‌ಗೆ 2019ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಯಲ್ಲಿನ ಪ್ರಧಾನ ಕೋರಿಕೆಯೇ ಹಾಲಿ ಅರ್ಜಿಯ ಮಧ್ಯಂತರ ಕೋರಿಕೆಯಾಗಿದೆ ಎಂದು ಹೇಳಿ ಅರ್ಜಿ ಸಂಬಂಧ ಆದೇಶ ಮಾಡಲು ನಿರಾಕರಿಸಿದೆ.

“2019ರ ಅರ್ಜಿಯ ʼಬಿʼ ಕೋರಿಕೆ ಮತ್ತು 2924ರ ಹಾಲಿ ಮಧ್ಯಂತರ ಅರ್ಜಿಯ ʼಎʼ ಕೋರಿಕೆ ನೋಡಿ… ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವು ನಿಮ್ಮತ್ತ ಮುಖ ನೆಟ್ಟಿದ್ದು ಹೀಗೆ ಮಾಡುವಂತಿಲ್ಲ ಎಂದು ಹೇಳುತ್ತದೆ. 1985ರ ತೀರ್ಪಿನ ಪ್ರಕಾರ ವಿಶೇಷ ಸಂದರ್ಭದಲ್ಲಿ ಹಾಗೆ ಮಾಡಬಹುದು ಎನ್ನಲಾಗಿದೆ. ಈ ಪ್ರಕರಣದಲ್ಲಿ ಮಾರ್ಚ್‌ 16ರಂದು ನೀವೇಕೆ ಅರ್ಜಿ ಸಲ್ಲಿಸಲಿಲ್ಲ” ಎಂದು ಪೀಠ ಪ್ರಶ್ನಿಸಿದೆ.

ಇದಕ್ಕೆ ಎಡಿಆರ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ದುಷ್ಯಂತ್‌ ದವೆ ಅವರು ಪ್ರತಿಕ್ರಿಯಿಸಿ, “ಚುನಾವಣಾ ಆಯೋಗ ಮಾಹಿತಿ ಬಹಿರಂಗಪಡಿಸಿದ ಬಳಿಕ ಮಾತ್ರವೇ ನಾವು ಅರ್ಜಿ ಸಲ್ಲಿಸಬಹುದಿತ್ತು" ಎಂದರು. ಆದಾಗ್ಯೂ, ನ್ಯಾಯಾಲಯವು ಮಧ್ಯಂತರ ಆದೇಶ ಮಾಡಲು ನಿರಾಕರಿಸಿತು.

“2019ರ ಅರ್ಜಿಯ ʼಬಿʼ ಕೋರಿಕೆ ಮತ್ತು ಹಾಲಿ ಮಧ್ಯಂತರ ಅರ್ಜಿಯ ʼಎʼ ಕೋರಿಕೆಯು ಮೇಲ್ನೋಟಕ್ಕೆ ಒಂದೇ ರೀತಿ ಇರುವುದರಿಂದ ನಾವು ಮಧ್ಯಂತರ ಆದೇಶ ಮಾಡುವ ಉದ್ದೇಶ ಹೊಂದಿಲ್ಲ. ಬೇಸಿಗೆ ರಜೆ ಬಳಿಕ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕು" ಎಂದು ನ್ಯಾಯಾಲಯ ಆದೇಶಿಸಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳ ಒಳಗೆ ಎಲ್ಲಾ ಮತಗಟ್ಟೆಗಳಲ್ಲಿನ ಮತದಾನದ ಅಂತಿಮ ದೃಢೀಕೃತ ದತ್ತಾಂಶ ಹಾಗೂ ಚಲಾವಣೆಯಾದ ಒಟ್ಟು ಮತಗಳನ್ನು ಬಹಿರಂಗ ಪಡಿಸಲು ಕೋರಿ ಸರ್ಕಾರೇತರ ಸಂಸ್ಥೆ ಎಡಿಆರ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಪ್ರಮಾಣೀಕೃತ ಮತದಾನ ದತ್ತಾಂಶ ಪ್ರಕಟಿಸುವ ಸಂಬಂಧ ಯಾವುದೇ ಕಾನೂನಾತ್ಮಕ ಹಕ್ಕನ್ನು ಚಲಾಯಿಸಲಾಗದು ಎಂದು ಬುಧವಾರವಷ್ಟೇ ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT