ಮತ ಚಲಾಯಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ  
ದೇಶ

Lok Sabha election 2024, 6ನೇ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39.13ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಉತ್ತರ ಪ್ರದೇಶದ 14 ಸ್ಥಾನಗಳು, ಹರ್ಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಪ್ರಗತಿಯಲ್ಲಿದೆ.

ನವದೆಹಲಿ: ಉತ್ತರ ಪ್ರದೇಶದ 14 ಸ್ಥಾನಗಳು, ಹರ್ಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಪ್ರಗತಿಯಲ್ಲಿದೆ.

ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟಾರೆ ಶೇಕಡಾ 39.13ರಷ್ಟು ಮತದಾನವಾಗಿದೆ. ರಾಜ್ಯವಾರು ಮತದಾನದಲ್ಲಿ ಬಿಹಾರದಲ್ಲಿ ಶೇಕಡಾ 36.48, ಹರಿಯಾಣದಲ್ಲಿ ಶೇಕಡಾ 36.48, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇಕಡಾ 35.22, ಜಾರ್ಖಂಡ್ ನಲ್ಲಿ ಶೇಕಡಾ 42.54, ದೆಹಲಿಯಲ್ಲಿ ಶೇಕಡಾ 34.37, ಒಡಿಶಾದಲ್ಲಿ ಶೇಕಡಾ 35.69, ಉತ್ತರ ಪ್ರದೇಶದಲ್ಲಿ ಶೇಕಡಾ 37.23, ಪಶ್ಚಿಮ ಬಂಗಾಳದಲ್ಲಿ ಶೇಕಡಾ 54.8ರಷ್ಟು ಮತದಾನವಾಗಿದೆ.

ಪಶ್ಚಿಮ ಬಂಗಾಳದ ಕೆಲವೆಡೆ ಹಿಂಸಾಚಾರ: ಪಶ್ಚಿಮ ಬಂಗಾಳದ ಎಂಟು ಲೋಕಸಭಾ ಕ್ಷೇತ್ರಗಳ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಚುನಾವಣಾ ಆಯೋಗಕ್ಕೆ ವಿವಿಧ ರಾಜಕೀಯ ಪಕ್ಷಗಳಿಂದ ಬೆಳಗ್ಗೆ 11 ಗಂಟೆಯವರೆಗೆ 954 ದೂರುಗಳು ಬಂದಿದ್ದು, ಇವಿಎಂ ಅಸಮರ್ಪಕ ಕಾರ್ಯಗಳು ಮತ್ತು ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ತಡೆಯಲಾಗಿದೆ.

ಘಟಾಲ್ ಕ್ಷೇತ್ರದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸುವುದನ್ನು ತಡೆಯುವ ಬಗ್ಗೆ ಘರ್ಷಣೆ ನಡೆದಿದೆ. ಟಿಎಂಸಿ ಗೂಂಡಾಗಳು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಿರಣ್ ಚಟರ್ಜಿ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮತದಾನ ಆರಂಭಕ್ಕೂ ಮುನ್ನ ಇಂದು ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ವಿವಿಧ ರಾಜ್ಯಗಳಲ್ಲಿ ಅಣಕು ಮತದಾನ ನಡೆಸಲಾಯಿತು.

ಒಡಿಶಾದ ನಲವತ್ತೆರಡು ವಿಧಾನಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ದೆಹಲಿ ಮತ್ತು ಹರಿಯಾಣದ ಎಲ್ಲಾ ಸಂಸದೀಯ ಸ್ಥಾನಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್ ಮತ್ತು ಮೆಹಬೂಬಾ ಮುಫ್ತಿ ಸೇರಿದ್ದಾರೆ. ಖಟ್ಟರ್ ಅವರು ಕರ್ನಾಲ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಮೆಹಬೂಬಾ ಮುಫ್ತಿ ಅನಂತನಾಗ್-ರಾಜೌರಿಯಿಂದ ಪಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಮತದಾನ ಆರಂಭಕ್ಕೂ ಮುನ್ನ ಇಂದು ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ವಿವಿಧ ರಾಜ್ಯಗಳಲ್ಲಿ ಅಣಕು ಮತದಾನ ನಡೆಸಲಾಯಿತು.

ಒಡಿಶಾದ ನಲವತ್ತೆರಡು ವಿಧಾನಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ದೆಹಲಿ ಮತ್ತು ಹರಿಯಾಣದ ಎಲ್ಲಾ ಸಂಸದೀಯ ಸ್ಥಾನಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್ ಮತ್ತು ಮೆಹಬೂಬಾ ಮುಫ್ತಿ ಸೇರಿದ್ದಾರೆ. ಖಟ್ಟರ್ ಅವರು ಕರ್ನಾಲ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಮೆಹಬೂಬಾ ಮುಫ್ತಿ ಅನಂತನಾಗ್-ರಾಜೌರಿಯಿಂದ ಪಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮತ್ತು ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಸೇರಿದಂತೆ ಕೆಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಾನ್ಸುರಿ ಸ್ವರಾಜ್, ಸೋಮನಾಥ್ ಭಾರತಿ, ಮನೋಜ್ ತಿವಾರಿ, ಕನ್ಹಯ್ಯಾ ಕುಮಾರ್, ದಿನೇಶ್ ಲಾಲ್ ಯಾದವ್ ಅಲಿಯಾಸ್ 'ನಿರಾಹುವಾ', ಧರ್ಮೇಂದ್ರ ಯಾದವ್, ಅಭಿಜಿತ್ ಗಂಗೋಪಾಧ್ಯಾಯ, ಅಗ್ನಿಮಿತ್ರ ಪಾಲ್, ನವೀನ್ ಜಿಂದಾಲ್, ರಾಜ್ ಬಬ್ಬರ್, ದೀಪೇಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ ಮತ್ತು ಅಪರಾಜಿತಾ ಸಾರಂಗಿಯಾ ಕೂಡ ಇದ್ದಾರೆ.

ಲೋಕಸಭೆ ಚುನಾವಣೆ 2024ರಲ್ಲಿ ಇಂದು ದೇಶದಲ್ಲಿ 6ನೇ ಸುತ್ತಿನ ಮತದಾನವಾಗಿದೆ. ಆರನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರನ್ನು ಕೋರಿದ್ದು, ಪ್ರತಿಯೊಂದು ಮತವೂ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಜನರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಮತ್ತು ಸಕ್ರಿಯವಾಗಿದ್ದಾಗ ಪ್ರಜಾಪ್ರಭುತ್ವವು ಅಭಿವೃದ್ಧಿ ಹೊಂದುತ್ತದೆ ಎಂದು ಅವರು 'ಎಕ್ಸ್' ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

2024ರ ಲೋಕಸಭೆ ಚುನಾವಣೆಯ 6ನೇ ಹಂತದಲ್ಲಿ ಮತದಾನ ಮಾಡುವ ಎಲ್ಲರಿಗೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನಾನು ಕೋರುತ್ತೇನೆ. ಪ್ರತಿ ಮತವೂ ಮುಖ್ಯವಾಗುತ್ತದೆ. ಜನರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಮತ್ತು ಸಕ್ರಿಯವಾಗಿದ್ದಾಗ ಪ್ರಜಾಪ್ರಭುತ್ವವು ಅಭಿವೃದ್ಧಿಗೊಳ್ಳುತ್ತದೆ. ನಾನು ವಿಶೇಷವಾಗಿ ಮಹಿಳಾ ಮತದಾರರು ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಕೋರುತ್ತೇನೆ ಎಂದು ಹೇಳಿದ್ದಾರೆ.

ಏಕತೆ, ನ್ಯಾಯ, ಪ್ರಮುಖ ವಿಚಾರಗಳಿಗೆ ಮತ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಮನವಿ: ನನ್ನ ಪ್ರೀತಿಯ ದೇಶವಾಸಿಗಳೇ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಹೋರಾಟವು ಅಂತಿಮ ಹಂತ ತಲುಪಿದೆ, ಇಂದು ನೀವು ಕಡ್ಡಾಯವಾಗಿ ಮತದಾನ ಮಾಡಬೇಕು. ಏಕತೆ, ನ್ಯಾಯ ಮತ್ತು ಪ್ರಮುಖ ವಿಷಯಗಳಿಗೆ ಮತ ಚಲಾಯಿಸಿ. ದ್ವೇಷದ ರಾಜಕೀಯದ ವಿರುದ್ಧ ಮತ ಚಲಾಯಿಸಿ, ಇವಿಎಂನಲ್ಲಿ ಬಟನ್ ಒತ್ತುವ ಮೊದಲು ಎರಡು ಬಾರಿ ಯೋಚಿಸಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.

ನಿಮಗೆ ನ್ಯಾಯಯುತ ರಾಜಕೀಯ ಬೇಡವೇ, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಇದ್ದರೆ ಯುವಕರು, ರೈತರು, ಮಹಿಳೆಯರು, ಕಾರ್ಮಿಕರು ಮತ್ತು ಸಮಾನತೆಗೆ ನ್ಯಾಯದ ಮೂಲಕ ಪ್ರಗತಿಪರ ಮತ್ತು ಅಂತರ್ಗತ ಭಾರತವನ್ನು ನಿರ್ಮಿಸಬಹುದು. ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT