TNIE
ದೇಶ

ದೆಹಲಿ ಆಸ್ಪತ್ರೆ ಅಗ್ನಿ ದುರಂತ: ಪರವಾನಗಿ ಅವಧಿ ಮುಕ್ತಾಯ; ಅಗ್ನಿಶಾಮಕ ಇಲಾಖೆಯಿಂದ NOC ಇಲ್ಲ!

ಪೂರ್ವ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಬೇಬಿ ಕೇರ್ ಆಸ್ಪತ್ರೆಯ ಪರವಾನಗಿ ಅವಧಿ ಮುಗಿದಿದ್ದರೂ ಸಹ ಚಾಲನೆಯಲ್ಲಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ ಮತ್ತು ಅಗ್ನಿಶಾಮಕ ಇಲಾಖೆಯಿಂದ NOC ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಪೂರ್ವ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಬೇಬಿ ಕೇರ್ ಆಸ್ಪತ್ರೆಯ ಪರವಾನಗಿ ಅವಧಿ ಮುಗಿದಿದ್ದರೂ ಸಹ ಚಾಲನೆಯಲ್ಲಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ ಮತ್ತು ಅಗ್ನಿಶಾಮಕ ಇಲಾಖೆಯಿಂದ NOC ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ನಿಂದ ಬೇಬಿ ಕೇರ್ ಆಸ್ಪತ್ರೆಗೆ ನೀಡಲಾದ ಪರವಾನಗಿ ಈಗಾಗಲೇ ಮಾರ್ಚ್ 31 ರಂದು ಮುಕ್ತಾಯಗೊಂಡಿದೆ. ಆಸ್ಪತ್ರೆಗೆ ನೀಡಲಾದ ಅವಧಿ ಮುಗಿದ ಪರವಾನಗಿಯು ಕೇವಲ ಐದು ಹಾಸಿಗೆಗಳಿಗೆ ಮಾತ್ರ ಎಂದು ಶಹದಾರ ಉಪ ಪೊಲೀಸ್ ಆಯುಕ್ತ ಸುರೇಂದ್ರ ಚೌಧರಿ ಹೇಳಿದರು. ಘಟನೆಯ ವೇಳೆ 12 ನವಜಾತ ಶಿಶುಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಯಾವುದೇ ತುರ್ತು ಪರಿಸ್ಥಿತಿಗಾಗಿ ಅಗ್ನಿಶಾಮಕ ಸಾಧನಗಳನ್ನು ಅಳವಡಿಸಲಾಗಿಲ್ಲ. ತುರ್ತು ನಿರ್ಗಮನಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆಸ್ಪತ್ರೆಯಲ್ಲಿ ಅಗ್ನಿಶಾಮಕ ತೆರವು ಇಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವು ಯಾವುದೇ ಅಗ್ನಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹೊಂದಿಲ್ಲ. ನಾವು ಸೋಮವಾರ ಎನ್ಒಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತೇವೆ ಎಂದು ಡಿಎಫ್‌ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ನಂತರ ತಲೆಮರೆಸಿಕೊಂಡಿದ್ದ ಆಸ್ಪತ್ರೆ ಮಾಲೀಕ ಡಾ. ನವೀನ್ ಕಿಚ್ಚಿ ಮತ್ತು ಕರ್ತವ್ಯ ನಿರತ ಸಿಬ್ಬಂದಿ, ಅನರ್ಹ ವೈದ್ಯ ಡಾ.ಆಕಾಶ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ದುರಂತದ ಬಗ್ಗೆ ದೆಹಲಿ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT