TNIE
ದೇಶ

ದೆಹಲಿ ಆಸ್ಪತ್ರೆ ಅಗ್ನಿ ದುರಂತ: ಪರವಾನಗಿ ಅವಧಿ ಮುಕ್ತಾಯ; ಅಗ್ನಿಶಾಮಕ ಇಲಾಖೆಯಿಂದ NOC ಇಲ್ಲ!

ಪೂರ್ವ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಬೇಬಿ ಕೇರ್ ಆಸ್ಪತ್ರೆಯ ಪರವಾನಗಿ ಅವಧಿ ಮುಗಿದಿದ್ದರೂ ಸಹ ಚಾಲನೆಯಲ್ಲಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ ಮತ್ತು ಅಗ್ನಿಶಾಮಕ ಇಲಾಖೆಯಿಂದ NOC ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಪೂರ್ವ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಬೇಬಿ ಕೇರ್ ಆಸ್ಪತ್ರೆಯ ಪರವಾನಗಿ ಅವಧಿ ಮುಗಿದಿದ್ದರೂ ಸಹ ಚಾಲನೆಯಲ್ಲಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ ಮತ್ತು ಅಗ್ನಿಶಾಮಕ ಇಲಾಖೆಯಿಂದ NOC ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ನಿಂದ ಬೇಬಿ ಕೇರ್ ಆಸ್ಪತ್ರೆಗೆ ನೀಡಲಾದ ಪರವಾನಗಿ ಈಗಾಗಲೇ ಮಾರ್ಚ್ 31 ರಂದು ಮುಕ್ತಾಯಗೊಂಡಿದೆ. ಆಸ್ಪತ್ರೆಗೆ ನೀಡಲಾದ ಅವಧಿ ಮುಗಿದ ಪರವಾನಗಿಯು ಕೇವಲ ಐದು ಹಾಸಿಗೆಗಳಿಗೆ ಮಾತ್ರ ಎಂದು ಶಹದಾರ ಉಪ ಪೊಲೀಸ್ ಆಯುಕ್ತ ಸುರೇಂದ್ರ ಚೌಧರಿ ಹೇಳಿದರು. ಘಟನೆಯ ವೇಳೆ 12 ನವಜಾತ ಶಿಶುಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಯಾವುದೇ ತುರ್ತು ಪರಿಸ್ಥಿತಿಗಾಗಿ ಅಗ್ನಿಶಾಮಕ ಸಾಧನಗಳನ್ನು ಅಳವಡಿಸಲಾಗಿಲ್ಲ. ತುರ್ತು ನಿರ್ಗಮನಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆಸ್ಪತ್ರೆಯಲ್ಲಿ ಅಗ್ನಿಶಾಮಕ ತೆರವು ಇಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡವು ಯಾವುದೇ ಅಗ್ನಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹೊಂದಿಲ್ಲ. ನಾವು ಸೋಮವಾರ ಎನ್ಒಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತೇವೆ ಎಂದು ಡಿಎಫ್‌ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ನಂತರ ತಲೆಮರೆಸಿಕೊಂಡಿದ್ದ ಆಸ್ಪತ್ರೆ ಮಾಲೀಕ ಡಾ. ನವೀನ್ ಕಿಚ್ಚಿ ಮತ್ತು ಕರ್ತವ್ಯ ನಿರತ ಸಿಬ್ಬಂದಿ, ಅನರ್ಹ ವೈದ್ಯ ಡಾ.ಆಕಾಶ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ದುರಂತದ ಬಗ್ಗೆ ದೆಹಲಿ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT