ಪ್ರಧಾನಿ ಮೋದಿ 
ದೇಶ

INDIA ಬಣದಿಂದ ದೇಶದ ಬಹುಸಂಖ್ಯಾತರನ್ನು 2ನೇ ದರ್ಜೆ ಪ್ರಜೆಗಳನ್ನಾಗಿ ಮಾಡಲು ಯತ್ನ- ಪ್ರಧಾನಿ ಮೋದಿ

ದೇಶದ ಬಹುಸಂಖ್ಯಾತ ಸಮುದಾಯವನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡಲು INDIA ಬಣದ ಪಕ್ಷಗಳು ಬಯಸಿವೆ. ಮೋದಿ,ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನವನ್ನು ಪುನರ್ ರಚಿಸಲು ಯೋಜಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆರೋಪಿಸಿದ್ದಾರೆ.

ಮೌ: ದೇಶದ ಬಹುಸಂಖ್ಯಾತ ಸಮುದಾಯವನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡಲು INDIA ಬಣದ ಪಕ್ಷಗಳು ಬಯಸಿವೆ. ಮೋದಿ,ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನವನ್ನು ಪುನರ್ ರಚಿಸಲು ಯೋಜಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವಾಂಚಲ ವಲಯದ ಘೋಷಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, INDIA ಬಣದ ಪಕ್ಷಗಳು ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ರದ್ದು, ಅದನ್ನು ಮುಸ್ಲಿಂರಿಗೆ ನೀಡಲಿವೆ ಎಂದು ಅವರು ಹೇಳಿದರು.

INDIA ಬಣದ ಅಂಗವಾಗಿರುವ ಸಮಾಜವಾದಿ ಮತ್ತು ಕಾಂಗ್ರೆಸ್ ಅನೇಕ ವರ್ಷಗಳಿಂದ ಪೂರ್ವಂಚಲವನ್ನು ನಿರ್ಲಕ್ಷಿಸಿವೆ. ಮಾಫಿಯಾ ವಲಯ, ಬಡತನ ಮತ್ತು ಅಸಹಾಯಕತೆಯ ಪ್ರದೇಶವನ್ನಾಗಿ ಪರಿವರ್ತಿಸಿವೆ. ಅವರು ವಿವಿಧ ಜಾತಿಗಳಲ್ಲಿ ತಮ್ಮೊಳಗೆ ಜಗಳವಾಡುತ್ತಿವೆ ಎಂದು ಮಾಡುತ್ತಿವೆ. ಇದರಿಂದಾಗಿ ಅವರು ದುರ್ಬಲರಾಗುತ್ತಾರೆ. ವಾಸ್ತವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು" ಇದನ್ನು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

INDIA ಬಣದ ದೊಡ್ಡ ಪಿತೂರಿ ಬಗ್ಗೆ ಜನರಿಗೆ ಎಚ್ಚರಿಸಲು ಇಂದು ಪೂರ್ವಾಂಚಲ ಮತ್ತು ಘೋಸಿಗೆ ಬಂದಿರುವುದಾಗಿ ಹೇಳಿದ ಮೋದಿ, ವಿಪಕ್ಷಗಳ ಬಣ ಮೂರು ದೊಡ್ಡ ಪಿತ್ತೂರಿ ರೂಪಿಸಿವೆ. ಮೊದಲನೇಯದಾಗಿ ಅವರು ಸಂವಿಧಾನವನ್ನು ಬದಲಾಯಿಸುತ್ತಾರೆ. ಅಲ್ಲದೇ, ದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಹೊಸದಾಗಿ ಬರೆಯುತ್ತಾರೆ. ಎರಡನೇಯದಾಗಿ SC, ST, OBC ಗಳಿಗೆ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ. ಮೂರನೇಯದಾಗಿ ಇಡೀ ಮೀಸಲಾತಿಯನ್ನು ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ನೀಡುತ್ತಾರೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT