ಪ್ರಧಾನಿ ಮೋದಿ 
ದೇಶ

INDIA ಬಣದಿಂದ ದೇಶದ ಬಹುಸಂಖ್ಯಾತರನ್ನು 2ನೇ ದರ್ಜೆ ಪ್ರಜೆಗಳನ್ನಾಗಿ ಮಾಡಲು ಯತ್ನ- ಪ್ರಧಾನಿ ಮೋದಿ

ದೇಶದ ಬಹುಸಂಖ್ಯಾತ ಸಮುದಾಯವನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡಲು INDIA ಬಣದ ಪಕ್ಷಗಳು ಬಯಸಿವೆ. ಮೋದಿ,ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನವನ್ನು ಪುನರ್ ರಚಿಸಲು ಯೋಜಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆರೋಪಿಸಿದ್ದಾರೆ.

ಮೌ: ದೇಶದ ಬಹುಸಂಖ್ಯಾತ ಸಮುದಾಯವನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡಲು INDIA ಬಣದ ಪಕ್ಷಗಳು ಬಯಸಿವೆ. ಮೋದಿ,ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನವನ್ನು ಪುನರ್ ರಚಿಸಲು ಯೋಜಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವಾಂಚಲ ವಲಯದ ಘೋಷಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, INDIA ಬಣದ ಪಕ್ಷಗಳು ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ರದ್ದು, ಅದನ್ನು ಮುಸ್ಲಿಂರಿಗೆ ನೀಡಲಿವೆ ಎಂದು ಅವರು ಹೇಳಿದರು.

INDIA ಬಣದ ಅಂಗವಾಗಿರುವ ಸಮಾಜವಾದಿ ಮತ್ತು ಕಾಂಗ್ರೆಸ್ ಅನೇಕ ವರ್ಷಗಳಿಂದ ಪೂರ್ವಂಚಲವನ್ನು ನಿರ್ಲಕ್ಷಿಸಿವೆ. ಮಾಫಿಯಾ ವಲಯ, ಬಡತನ ಮತ್ತು ಅಸಹಾಯಕತೆಯ ಪ್ರದೇಶವನ್ನಾಗಿ ಪರಿವರ್ತಿಸಿವೆ. ಅವರು ವಿವಿಧ ಜಾತಿಗಳಲ್ಲಿ ತಮ್ಮೊಳಗೆ ಜಗಳವಾಡುತ್ತಿವೆ ಎಂದು ಮಾಡುತ್ತಿವೆ. ಇದರಿಂದಾಗಿ ಅವರು ದುರ್ಬಲರಾಗುತ್ತಾರೆ. ವಾಸ್ತವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು" ಇದನ್ನು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

INDIA ಬಣದ ದೊಡ್ಡ ಪಿತೂರಿ ಬಗ್ಗೆ ಜನರಿಗೆ ಎಚ್ಚರಿಸಲು ಇಂದು ಪೂರ್ವಾಂಚಲ ಮತ್ತು ಘೋಸಿಗೆ ಬಂದಿರುವುದಾಗಿ ಹೇಳಿದ ಮೋದಿ, ವಿಪಕ್ಷಗಳ ಬಣ ಮೂರು ದೊಡ್ಡ ಪಿತ್ತೂರಿ ರೂಪಿಸಿವೆ. ಮೊದಲನೇಯದಾಗಿ ಅವರು ಸಂವಿಧಾನವನ್ನು ಬದಲಾಯಿಸುತ್ತಾರೆ. ಅಲ್ಲದೇ, ದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಹೊಸದಾಗಿ ಬರೆಯುತ್ತಾರೆ. ಎರಡನೇಯದಾಗಿ SC, ST, OBC ಗಳಿಗೆ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ. ಮೂರನೇಯದಾಗಿ ಇಡೀ ಮೀಸಲಾತಿಯನ್ನು ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ನೀಡುತ್ತಾರೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT