ಅರವಿಂದ ಕೇಜ್ರಿವಾಲ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ಆದಾಗ್ಯೂ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯನ್ನು ಪಡೆಯಲು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದಲ್ಲಿ ಅವರ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದನ್ನು ಮತ್ತು ಅಧಿಕೃತ ಕಡತಗಳಿಗೆ ಸಹಿ ಮಾಡುವುದಕ್ಕೆ ನಿರ್ಬಂಧ ವಿಧಿಸಿತ್ತು.

ಮುಖ್ಯಮಂತ್ರಿ ಇದೀಗ ಸಲ್ಲಿಸಿರುವ ತಮ್ಮ ಹೊಸ ಅರ್ಜಿಯಲ್ಲಿ, ತಾವು ಏಳು ಕೆಜಿ ತೂಕವನ್ನು ಕಳೆದುಕೊಂಡಿರುವುದು ಸೇರಿದಂತೆ ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ತಾವು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ ಮತ್ತು ಈ ಉದ್ದೇಶಕ್ಕಾಗಿ ಜೂನ್ 1 ರಂದು ಕೊನೆಗೊಳ್ಳಲಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

2021-22ರಲ್ಲಿ ಜಾರಿಗೆ ಬಂದ ಈಗ ರದ್ದಾಗಿರುವ ದೆಹಲಿ ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿನ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT