ಮಮತಾ ಬ್ಯಾನರ್ಜಿ TNIE
ದೇಶ

ಜೂನ್ 1ರಂದು INDIA ಮೈತ್ರಿಕೂಟದ ಮಹತ್ವದ ಸಭೆ; ಮಮತಾ ಬ್ಯಾನರ್ಜಿ ಗೈರು!

ಜೂನ್ 1 ರಂದು ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಜರಾಗುವುದಿಲ್ಲ. ಚಂಡಮಾರುತ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯ ಹಾಗೂ ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನದ ಕಾರಣ ಮಮತಾ ಅವರು ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ.

ಜೂನ್ 1 ರಂದು ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಜರಾಗುವುದಿಲ್ಲ. ಚಂಡಮಾರುತ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯ ಹಾಗೂ ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನದ ಕಾರಣ ಮಮತಾ ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ.

ಸಭೆಗೆ ನಾನು ಹೋಗದಿದ್ದರೂ ನನ್ನ ಮನಸ್ಸು ಅಲ್ಲೆ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಜೂನ್ 1ರಂದು ನಡೆಯಲಿದ್ದು ಅದೇ ದಿನ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ಕೋಲ್ಕತ್ತಾ ದಕ್ಷಿಣ ಮತ್ತು ಕೋಲ್ಕತ್ತಾ ಉತ್ತರ ಸೇರಿದಂತೆ ಒಂಬತ್ತು ಕ್ಷೇತ್ರಗಳಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಜಾದವ್‌ಪುರ, ದುಮ್ಡಮ್, ಬರಾಸತ್, ಬಸಿರ್‌ಹತ್, ಜಯನಗರ, ಮಥುರಾಪುರ ಮತ್ತು ಡೈಮಂಡ್ ಹಾರ್ಬರ್ ನಲ್ಲಿ ಮತದಾನ ನಡೆಯಲಿವೆ.

ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ಟಿಎಂಸಿ ಪಕ್ಷವು ತನ್ನ ತವರು ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಇತರ ಯಾವುದೇ ಇಂಡಿಯಾ ಬ್ಲಾಕ್ ಪಕ್ಷದೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಹೊಂದಿಲ್ಲ. ಆದರೆ ಉತ್ತರ ಪ್ರದೇಶದ ಭದೋಹಿಯಲ್ಲಿ ಟಿಎಂಸಿ ಅಭ್ಯರ್ಥಿ ಲಲಿತೇಶಪತಿ ತ್ರಿಪಾಠಿ ಅವರನ್ನು ಮಿತ್ರ ಪಕ್ಷ ಸಮಾಜವಾದಿ ಪಕ್ಷವು ಬೆಂಬಲಿಸಿದೆ. 28 ವಿರೋಧ ಪಕ್ಷಗಳು ಒಟ್ಟಾಗಿ ಇಂಡಿಯಾ ಕೂಟವನ್ನು ರಚಿಸಿವೆ. ಆದಾಗ್ಯೂ, ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ನಂತಹ ಕೆಲವು ಪಕ್ಷಗಳು ನಂತರ ಎನ್ಡಿಎಗೆ ಸೇರ್ಪಡೆಗೊಂಡವು.

ಇಂಡಿಯಾ ಮೈತ್ರಿಕೂಟದ ಎಲ್ಲಾ ಸಭೆ ಮತ್ತು ರ್ಯಾಲಿಗಳಲ್ಲಿ ಟಿಎಂಸಿ ಭಾಗವಹಿಸಿತ್ತು. ಮಾರ್ಚ್ 31ರಂದು ದೆಹಲಿಯಲ್ಲಿ ನಡೆದ ರ್ಯಾಲಿಯಲ್ಲಿ, ಟಿಎಂಸಿ ನಾಯಕ ಡೆರೆಕ್ ಒ'ಬ್ರೇನ್ ಅವರು ಇಂಡಿಯಾ ಬ್ಲಾಕ್‌ನ ಭಾಗವಾಗಿ ಉಳಿಯುವುದಾಗಿ ಘೋಷಿಸಿದ್ದರು. ಕಳೆದ ವರ್ಷ ಜೂನ್ 23ರಂದು ಪಾಟ್ನಾದಲ್ಲಿ ಇಂಡಿ ಮೈತ್ರಿ ಬ್ಲಾಕ್‌ನ ಮೊದಲ ಸಭೆ ನಡೆದಿತ್ತು. ಇದರ ನಂತರ, 2023ರ ಜುಲೈ 17-18ರಂದು ಬೆಂಗಳೂರಿನಲ್ಲಿ ಮತ್ತು ನಂತರ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರ ನಡುವೆ ಮುಂಬೈನಲ್ಲಿ ಸಭೆ ನಡೆಯಿತು. ಇಲ್ಲಿಯೇ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ ಲೋಕಸಭೆ ಚುನಾವಣೆ ಎದುರಿಸಲು ಸಂಕಲ್ಪ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT