ಜೆ ಪಿ ನಡ್ಡಾ 
ದೇಶ

ಪ್ರಧಾನಿ ಮೋದಿ, ಬಿಜೆಪಿ ಅಧಿಕಾರದಲ್ಲಿರುವವರೆಗೂ ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ: ಜೆಪಿ ನಡ್ಡಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷ ಅಧಿಕಾರದಲ್ಲಿರುವವರೆಗೆ ಧರ್ಮದ ಆಧಾರದ ಮೇಲೆ ಯಾವುದೇ ಮೀಸಲಾತಿ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ಹೇಳಿದ್ದಾರೆ.

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷ ಅಧಿಕಾರದಲ್ಲಿರುವವರೆಗೆ ಧರ್ಮದ ಆಧಾರದ ಮೇಲೆ ಯಾವುದೇ ಮೀಸಲಾತಿ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿವೆ ಎಂದು ಆರೋಪಿಸಿದರು. 'ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧಿಕಾರದಲ್ಲಿರುವವರೆಗೆ ಅಂತಹ ಮೀಸಲಾತಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಮೂರನೇ ಬಾರಿಗೆ ಸ್ಪರ್ಧಿಸಿರುವ ಮೋದಿ ಪರ ಪ್ರಚಾರ ಮಾಡಲು ನಗರಕ್ಕೆ ಬಂದಿದ್ದ ಅವರು, ದಲಿತ, ಪರಿಶಿಷ್ಟ ವರ್ಗ, ಹಿಂದುಳಿದ, ಅತ್ಯಂತ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಕಬಳಿಸಲು ಅವಕಾಶ ನೀಡುವುದಿಲ್ಲ. ಜೂನ್ 4 ರ ನಂತರ ವಿಪಕ್ಷಗಳ ಸ್ಥಿತಿ ಏನಾಗಲಿದೆ ಎಂಬುದನ್ನು ನೋಡಲಿದ್ದೀರಿ ಎಂದರು.

ನಂತರ ಚಿಂತಕರ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ದೀರ್ಘಕಾಲದ ರಾಜಕೀಯ ಎಂದರೆ ‘ಒಡೆದು ಆಳುವುದು. ಆದರೆ ಈಗ 'ಅಭಿವೃದ್ಧಿಯ ರಾಜಕಾರಣ' ನಡೆಯುತ್ತಿದೆ. 10 ವರ್ಷಗಳ ಹಿಂದೆ ರಾಜಕೀಯ ಪರಿಸ್ಥಿತಿ ಹೇಗಿತ್ತು ಎಂದು ಕೇಳಿದ ನಡ್ಡಾ, ಭಾರತವನ್ನು ಭ್ರಷ್ಟ ದೇಶಗಳ ಪಟ್ಟಿಗೆ ಸೇರಿಸಲಾಗಿತ್ತು. ದೊಡ್ಡ ಸಮಸ್ಯೆ ಎಂದರೆ ಸಾಮಾನ್ಯ ಜನರು ರಾಜಕೀಯದ ಬಗ್ಗೆ ಅಸಡ್ಡೆ ಹೊಂದುವ ಮೂಲಕ ನಂಬಿಕೆ ಕಳೆದುಕೊಂಡಿದ್ದರು. ಅವರ ನಂಬಿಕೆ ಮುರಿದುಹೋಗಿತ್ತು. ಇದು ಪ್ರಜಾಪ್ರಭುತ್ವಕ್ಕೆ ಅಪಾಯವಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ, ಪ್ರಧಾನಿ ಮೋದಿ ದೇಶದ ಅಭಿವೃದ್ಧಿಯ ಬಗ್ಗೆ ಸಾಮಾನ್ಯ ಜನರಲ್ಲಿ ನಂಬಿಕೆಯನ್ನು ಮೂಡಿಸಿದ್ದಾರೆ" ಎಂದು ಹೇಳಿದರು.

ಈ ಹಿಂದೆ ಜಾತಿವಾದವನ್ನು ಹರಡುವ ಪ್ರತಿಪಕ್ಷಗಳು ಧರ್ಮ ಮತ್ತು ಪ್ರದೇಶದ ಆಧಾರದ ಮೇಲೆ ವಿಭಜನೆ ಮಾಡಲು ಒಡೆದು ಆಳುವ' ನೀತಿಯನ್ನು ಬಳಸಿದವು. ಇಂದು ಅಭಿವೃದ್ಧಿಯ ರಾಜಕಾರಣ ನಡೆಯುತ್ತಿದೆ ಮತ್ತು ಇದರಲ್ಲಿ 'ಸಬ್ಕಾ ಸಾಥ್ ಸಬ್ಕಾ ಪ್ರಾರ್ಥನೆ ಔರ್ ಸಬ್ಕೆ ವಿಶ್ವಾಸ' (ಎಲ್ಲರ ಬೆಂಬಲ, ಪ್ರಯತ್ನ ಮತ್ತು ನಂಬಿಕೆ) ಆಧಾರವಾಗಿದೆ ಎಂದು ಜೆ ಪಿ ನಡ್ಡಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT