ದೇಶ

Remal Cyclone: ಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿದ್ದು ಏಳು ಮಂದಿ ಸಾವು, ಹಲವರು ನಾಪತ್ತೆ

ಮಿಜೋರಾಂನಲ್ಲೂ ರೆಮಲ್ ಚಂಡಮಾರುತ(Remal Cyclone)ದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು ಏಳು ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ.

ಐಜ್ವಾಲ್ ಜಿಲ್ಲೆ(ಮಿಜೋರಂ): ಮಿಜೋರಾಂನಲ್ಲೂ ರೆಮಲ್ ಚಂಡಮಾರುತ(Remal Cyclone)ದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು ಏಳು ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ.

ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತುಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಏಳು ಜನರ ಮೃತದೇಹ ಪತ್ತೆಯಾಗಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಮಳೆಯಿಂದಾಗಿ ರಾಜ್ಯದ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಂತಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಭೂಕುಸಿತದಿಂದಾಗಿ ಐಜ್ವಾಲ್ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿದೆ ಎಂದು ಅವರು ಹೇಳಿದರು. ಇದಲ್ಲದೆ, ಹಲವಾರು ಅಂತಾರಾಜ್ಯ ಹೆದ್ದಾರಿಗಳು ಭೂಕುಸಿತದಿಂದ ಸಂಪರ್ಕ ಕಡಿದುಕೊಂಡಿವೆ.

ಮಳೆಯ ಕಾರಣ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಅಗತ್ಯ ಸೇವೆಗಳನ್ನು ಒದಗಿಸುವವರನ್ನು ಹೊರತುಪಡಿಸಿ ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT