ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ 
ದೇಶ

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ

ಮೇ 13 ರಂದು ನಾನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದಾಗ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ನವದೆಹಲಿ: ಈ ತಿಂಗಳ ಆರಂಭದಲ್ಲಿ ಸಿಎಂ ನಿವಾಸದಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಬುಧವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಬಂಧನವನ್ನು ಕಾನೂನುಬಾಹಿರ ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಮತ್ತು ಕಾನೂನಿನ ಆದೇಶದ ವಿರುದ್ಧದ ನಿಬಂಧನೆಗಳ ಸಂಪೂರ್ಣ ಉಲ್ಲಂಘನೆ ಎಂದು ಘೋಷಿಸಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ.

ಅಲ್ಲದೆ, ತಮ್ಮ ಅಕ್ರಮ ಬಂಧನಕ್ಕೆ 'ಸೂಕ್ತ ಪರಿಹಾರ' ನೀಡಬೇಕು ಮತ್ತು ತಮ್ಮನ್ನು ಬಂಧಿಸುವ ನಿರ್ಧಾರ ತೆಗೆದುಕೊಳ್ಳುವಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮವನ್ನು ಕೈಗೊಳ್ಳಬೇಕೆಂದು ಕೋರಿದ್ದಾರೆ.

ಸೋಮವಾರ, ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಗೌರವ್ ಗೋಯಲ್ ಅವರು ಸೋಮವಾರ ತನ್ನ ತೀರ್ಪನ್ನು ಪ್ರಕಟಿಸಿದ್ದು, ಬಿಭವ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಮೇ 13 ರಂದು ನಾನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದಾಗ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಈ ಸಂಬಂಧ ಮೇ 18 ರಂದು ಬಿಭವ್ ಕುಮಾರ್ ಅವರನ್ನು ಬಂಧಿಸಲಾಯಿತು ಮತ್ತು ಅದೇ ದಿನ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಕಳೆದ ಶುಕ್ರವಾರ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT