ಪ್ರಧಾನಿ ಮೋದಿ 
ದೇಶ

ಮಹಾತ್ಮ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಗುವಾಹಟಿ: ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ಮಾಪಕ ಲೂಯಿತ್ ಕುಮಾರ್ ಬರ್ಮನ್ ಅವರು ಮಹಾತ್ಮ ಗಾಂಧಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಮೋದಿ ಅವರು ರಾಷ್ಟ್ರಪಿತನ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬರ್ಮನ್ ಅವರು ಬುಧವಾರ ರಾತ್ರಿ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಈ ಸಂಬಂಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿ ಚಾನೆಲ್‌ಗೆ ನೀಡಿದ ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, "... '' ಗಾಂಧೀಜಿ ಅವರನ್ನು ಕಾಂಗ್ರೆಸ್‌ ಹೆಚ್ಚು ಜನಪ್ರಿಯಗೊಳಿಸಲೇ ಇಲ್ಲ. ಸಿನಿಮಾ ಬಿಡುಗಡೆ ಆದಮೇಲೆಯೇ ಜಗತ್ತಿಗೆ ಗಾಂಧಿ ಅವರ ಬಗ್ಗೆ ತಿಳಿಯಿತು. 75 ವರ್ಷಗಳಲ್ಲಿ ಗಾಂಧಿ ಅವರನ್ನು ಜಗತ್ತಿಗೆ ಪರಿಚಯಿಸುವ ಜವಾಬ್ದಾರಿ ನಮ್ಮದಾಗಿರಲಿಲ್ಲವೇ? ಸಿನಿಮಾ ಬಿಡುಗಡೆ ಆದ ಮೇಲೆಯೇ ಗಾಂಧಿ ಅವರ ಬಗ್ಗೆ ಕುತೂಹಲ ಹೆಚ್ಚಾಯಿತು'' ಎಂದಿದ್ದಾರೆ.

ಪ್ರಧಾನಿ ಮೋದಿ ಅವರ ಈ ಹೇಳಿಕೆಗೆ ಕಾಂಗ್ರೆಸ್‌ ಸೇರಿದಂತೆ ಅನೇಕರಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಹಲವು ನಾಯಕರು ಪ್ರಧಾನಿ ಮೋದಿಯ ಶಿಕ್ಷಣದ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ. ಈಗ ಅವರ ವಿರುದ್ಧ ದೂರು ದಾಖಲಾಗಿದೆ.

ಬರ್ಮನ್ ಅವರು ತಮ್ಮ ದೂರಿನಲ್ಲಿ, "ಇದು ಅತ್ಯಂತ ಅವಹೇಳನಕಾರಿ ಹೇಳಿಕೆಯಾಗಿದೆ ಮತ್ತು ಭಾರತೀಯರು ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಒಬ್ಬ ನಾಗರಿಕನಾಗಿ ನಾವು ಮಹಾತ್ಮ ಗಾಂಧಿಯವರಿಗೆ ಅವಮಾನ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

ಅವರನ್ನು ಜಗತ್ತಿಗೆ ಪರಿಚಯಿಸಲು ಯಾವುದೇ ಚಲನಚಿತ್ರದ ಅಗತ್ಯವಿಲ್ಲ ಎಂದು ಬರ್ಮನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT