ಶಹಜಹಾನ್ ಶೇಖ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಪಶ್ಚಿಮ ಬಂಗಾಳ ಟಿಎಂಸಿ ನಾಯಕ ಶಹಜಹಾನ್ ಶೇಖ್, ಅವರ ಸಹೋದರ ಮತ್ತು ಇಬ್ಬರು ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಗುರುವಾರ ತಿಳಿಸಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅಮಾನತುಗೊಂಡಿರುವ ಪಶ್ಚಿಮ ಬಂಗಾಳ ಟಿಎಂಸಿ ನಾಯಕ ಶಹಜಹಾನ್ ಶೇಖ್, ಅವರ ಸಹೋದರ ಮತ್ತು ಇಬ್ಬರು ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಗುರುವಾರ ತಿಳಿಸಿದೆ.

ಪ್ರಾಸಿಕ್ಯೂಷನ್ ದೂರಿನಲ್ಲಿ ಹೆಸರಿಸಲಾದ ಇತರ ಆರೋಪಿಗಳೆಂದರೆ ಶಿಬ್ ಪ್ರಸಾದ್ ಹಜ್ರಾ ಮತ್ತು ದಿದರ್ ಬೋಕ್ಷ್ ಮೊಲ್ಲಾ ಹಾಗೂ ಶೇಖ್ ಅಲಂಗೀರ್ (ಶಹಜಹಾನ್ ಶೇಖ್ ಸಹೋದರ).

ಕೋಲ್ಕತ್ತಾದ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಇಡಿ ತಿಳಿಸಿದೆ.

ಸಿಬಿಐ ಕೂಡ ಶೇಖ್ ಮತ್ತು ಇತರ ಕೆಲವರ ವಿರುದ್ಧ ಈ ವಾರ ಚಾರ್ಜ್ ಶೀಟ್ ಸಲ್ಲಿಸಿತ್ತು.

ಮೀನುಗಾರಿಕೆ ವ್ಯವಹಾರದ ನೆಪದಲ್ಲಿ ಅಕ್ರಮ ಹಣ ವರ್ಗಾವಣೆ, ಭೂ ಕಬಳಿಕೆ, ಅಕ್ರಮ ಮೀನು ಸಾಕಾಣಿಕೆ/ವ್ಯಾಪಾರ, ಇಟ್ಟಿಗೆ ಗದ್ದೆಗಳನ್ನು ಕಬಳಿಸುವುದು ಸೇರಿದಂತೆ ಹಲವು ಆರೋಪಗಳನ್ನು ಶಹಜಹಾನ್ ಶೇಖ್ ಎದುರಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅಮಾನತುಗೊಂಡಿರುವ ಟಿಎಂಸಿ ನಾಯಕ, ಅವರ ಸಹೋದರ ಮತ್ತು ಅವರ ಇಬ್ಬರು ಸಹಾಯಕರನ್ನು ಇಡಿ ಬಂಧಿಸಿದ್ದು, ಪ್ರಸ್ತುತ ಶಹಜಹಾನ್ ಶೇಖ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?

Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ

TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khanಗೆ ನ್ಯಾಯಾಂಗ ಬಂಧನ!

VIDEO: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

SCROLL FOR NEXT