ಆದಾಯ ತೆರಿಗೆ ಇಲಾಖೆ 
ದೇಶ

ಲೋಕಸಭಾ ಚುನಾವಣೆ: ಐಟಿ ಇಲಾಖೆಯಿಂದ 1,100 ಕೋಟಿ ರೂ. ನಗದು, ಚಿನ್ನಾಭರಣ ವಶ; ಅಗ್ರಸ್ಥಾನದಲ್ಲಿ ಕರ್ನಾಟಕ

ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಆದಾಯ ತೆರಿಗೆ ಇಲಾಖೆಯು ಅಂದಾಜು 1,100 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ. ಇದು 2019ರ ಲೋಕಸಭೆ ಚುನಾವಣೆ ವೇಳೆ ವಶಪಡಿಸಿಕೊಂಡ 390 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ 182ರಷ್ಟು ಹೆಚ್ಚಾಗಿದೆ.

ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ.

ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು ಅಂದಾಜು 1,100 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ. ಇದು 2019ರ ಲೋಕಸಭೆ ಚುನಾವಣೆ ವೇಳೆ ವಶಪಡಿಸಿಕೊಂಡ 390 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ 182ರಷ್ಟು ಹೆಚ್ಚಾಗಿದೆ.

ಮೂಲಗಳ ಪ್ರಕಾರ, ದೆಹಲಿ ಮತ್ತು ಕರ್ನಾಟಕವು ಅತಿ ಹೆಚ್ಚು ವಶಪಡಿಸಿಕೊಂಡ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಪ್ರತಿ ರಾಜ್ಯದಲ್ಲಿ 200 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, 150 ಕೋಟಿ ರೂ., ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದಲ್ಲಿ ಒಟ್ಟಾರೆಯಾಗಿ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜಕಾರಣಿಗಳು ಚುನಾವಣೆಯಲ್ಲಿ ಅಕ್ರಮವಾಗಿ ನಗದು ಸಾಗಣೆ ಮಾಡುವುದನ್ನು ಪರಿಶೀಲಿಸಲು ಪ್ರತಿ ರಾಜ್ಯವು 24x7 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ. ಮಾದರಿ ನೀತಿ ಸಂಹಿತೆಯು ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ.

50,000ಕ್ಕಿಂತ ಹೆಚ್ಚು ನಗದು ಅಥವಾ 10,000 ಕ್ಕಿಂತ ಹೆಚ್ಚಿನ ಮೌಲ್ಯದ ಹೊಸ ವಸ್ತುಗಳನ್ನು ಪೂರಕ ದಾಖಲೆಗಳಿಲ್ಲದೆ ಸಾಗಿಸುವ ವ್ಯಕ್ತಿಗಳಿಂದ ಈ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ವ್ಯಕ್ತಿಯು ಚುನಾವಣೆಗೆ ಸಂಬಂಧಿಸಿಲ್ಲದ ಮಾನ್ಯ ದಾಖಲೆಗಳನ್ನು ಒದಗಿಸಿದರೆ, ವಸ್ತುಗಳ್ನು ಹಿಂತಿರುಗಿಸಲಾಗುತ್ತದೆ. ಆದಾಗ್ಯೂ, ವಶಪಡಿಸಿಕೊಂಡ ನಗದು 10 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ರವಾನಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT