ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ಡು 
ದೇಶ

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು; ಬೇರೆ ಧರ್ಮದವರಿಗೆ VRS: TTD ನಿರ್ಧಾರ

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ" ಎಂದು ಅವರು ಹೇಳಿದರು.

ಹೈದರಾಬಾದ್: ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ" ಎಂದು ಅವರು ಹೇಳಿದರು. ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾದ ನಾಯ್ಡು ಅವರು ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಒಂದು ವಿಶೇಷತೆ ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ. ಮಂಡಳಿಯ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಎನ್‌ಡಿಎ ಸರ್ಕಾರದ ಇತರ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದರು.

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ತಿರುಮಲದಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಬಿಆರ್‌ ನಾಯ್ಡು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಬೇಕು. ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೆಲಸ ಮಾಡುವುದಾಗಿ ಹೇಳಿದರು. ಬಿ ಆರ್ ನಾಯ್ಡು ಅವರು ಹಿಂದೂ ಭಕ್ತಿ ಚಾನೆಲ್ ಸೇರಿದಂತೆ ತೆಲುಗು ಟಿವಿ ಚಾನೆಲ್‌ಗಳನ್ನು ನಡೆಸುತ್ತಿರುವ ಮಾಧ್ಯಮ ವ್ಯಕ್ತಿಯಾಗಿದ್ದಾರೆ. ತಿರುಮಲ ತಿರುಪತಿಯಲ್ಲಿರುವ ಪ್ರಸಿದ್ಧ ಬಾಲಾಜಿ ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಗಾಗಿ ಆಂಧ್ರ ಪ್ರದೇಶ ಸರ್ಕಾರವು 24 ಸದಸ್ಯರೊಂದಿಗೆ ಹೊಸ ಮಂಡಳಿಯನ್ನು ಬುಧವಾರ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT