ರಣಧೀರ್ ಜೈಸ್ವಾಲ್ PTI
ದೇಶ

ಭಾರತದ 19 ಕಂಪನಿಗಳನ್ನು ನಿರ್ಬಂಧಿಸಿದ ಅಮೆರಿಕ: ವಿದೇಶಾಂಗ ಸಚಿವಾಲಯ ಹೇಳಿದ್ದೇನು?

ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ ಭಾರತದ 19 ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧ ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದ್ದು ಭಾರತೀಯ ಕಂಪನಿಗಳು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದೆ. ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಅಮೆರಿಕ ನಿರ್ಬಂಧಗಳ ಕುರಿತ ವರದಿಗಳನ್ನು ಗಮನಿಸಿದ್ದೇವೆ. ಭಾರತವು ಕಾರ್ಯತಂತ್ರದ ವ್ಯಾಪಾರ ಮತ್ತು ಪ್ರಸರಣ ರಹಿತ ನಿಯಂತ್ರಣಗಳ ಮೇಲೆ ಬಲವಾದ ಕಾನೂನು ಮತ್ತು ನಿಯಂತ್ರಕ ಚೌಕಟ್ಟನ್ನು ಹೊಂದಿದೆ. ನಾವು ಮೂರು ಪ್ರಮುಖ ಬಹುಪಕ್ಷೀಯ ಪ್ರಸರಣ ರಹಿತ ರಫ್ತು ನಿಯಂತ್ರಣ ವ್ಯವಸ್ಥೆಗಳ ಸದಸ್ಯರೂ ಆಗಿದ್ದೇವೆ ಎಂದು ಹೇಳಿದರು.

'ಅನ್ವಯವಾಗುವ ರಫ್ತು ನಿಯಂತ್ರಣ ನಿಬಂಧನೆಗಳ ಬಗ್ಗೆ ಭಾರತೀಯ ಕಂಪನಿಗಳಿಗೆ ಅರಿವು ಮೂಡಿಸಲು ನಾವು ಎಲ್ಲಾ ಸಂಬಂಧಿತ ಇಲಾಖೆಗಳು ಮತ್ತು ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಅಲ್ಲದೆ, ಜಾರಿಗೆ ತರುತ್ತಿರುವ ಹೊಸ ಕ್ರಮಗಳ ಬಗ್ಗೆಯೂ ಅವರಿಗೆ ತಿಳಿಸಲಾಗುತ್ತಿದೆ. ಈ ಕ್ರಮಗಳು ಕೆಲವು ಸಂದರ್ಭಗಳಲ್ಲಿ ಭಾರತೀಯ ಕಂಪನಿಗಳ ಮೇಲೆ ಪರಿಣಾಮ ಬೀರಬಹುದು ಎಂದರು.

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ 275 ವ್ಯಕ್ತಿಗಳು ಮತ್ತು ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ. ಅದರಲ್ಲಿ 19 ಭಾರತೀಯ ಕಂಪನಿಗಳು ಸೇರಿವೆ. ರಷ್ಯಾಕ್ಕೆ ಸುಧಾರಿತ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಪೂರೈಸಿದ್ದಕ್ಕಾಗಿ ಚೀನಾ, ಸ್ವಿಟ್ಜರ್ಲೆಂಡ್, ಥೈಲ್ಯಾಂಡ್ ಮತ್ತು ಟರ್ಕಿಯ ಕಂಪನಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಯುಎಸ್ ಖಜಾನೆ ಇಲಾಖೆ ತಿಳಿಸಿತ್ತು. ರಷ್ಯಾ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಂಡಿರುವ ಅಮೆರಿಕ ಬುಧವಾರ 398 ಕಂಪನಿಗಳ ಮೇಲೆ ನಿರ್ಬಂಧ ಹೇರಿದೆ. ಭಾರತ, ರಷ್ಯಾ, ಚೀನಾ, ಹಾಂಗ್ ಕಾಂಗ್, ಯುಎಇ, ಟರ್ಕಿ, ಥೈಲ್ಯಾಂಡ್, ಮಲೇಷ್ಯಾ, ಸ್ವಿಟ್ಜರ್ಲೆಂಡ್ ಸೇರಿದಂತೆ ಹನ್ನೆರಡು ದೇಶಗಳ ಈ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT