ದೇಶ

ಜಾರ್ಖಂಡ್ ನಲ್ಲಿ ದ್ವೇಷ ಭಾವನೆ ತುಂಬಿದ ಭಾಷಣ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ವಿರುದ್ಧ ECI ಗೆ ಇಂಡಿಯಾ ಬ್ಲಾಕ್ ದೂರು

ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು, ರಾಷ್ಟ್ರೀಯ ಜನತಾ ದಳ (RJD), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist-Leninist), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಪ್ರತಿನಿಧಿಗಳು ದೂರು ಸಲ್ಲಿಸಿದ್ದಾರೆ.

ದಿಸ್ಪುರ್ : ಜಾರ್ಖಂಡ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು "ಕೆರಳಿಸುವ ಮತ್ತು ವಿಭಜಕ" ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (BJP) ನಾಯಕ ಹಿಮಂತ ಬಿಸ್ವಾ ಶರ್ಮ ವಿರುದ್ಧ ಇಂಡಿಯಾ ಬ್ಲಾಕ್ ಔಪಚಾರಿಕವಾಗಿ ದೂರು ದಾಖಲಿಸಿದೆ.

ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು, ರಾಷ್ಟ್ರೀಯ ಜನತಾ ದಳ (RJD), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist-Leninist), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಪ್ರತಿನಿಧಿಗಳು ದೂರು ಸಲ್ಲಿಸಿದ್ದಾರೆ.

ಮುಂಬರುವ ನವೆಂಬರ್ 13 ಮತ್ತು 20 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಉದ್ದೇಶದಿಂದ ಸಿಎಂ ಶರ್ಮ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನವೆಂಬರ್ 1 ರಂದು ಶರತ್‌ನಲ್ಲಿ ಮಾಡಿದ ಭಾಷಣದಲ್ಲಿ, ಮುಸ್ಲಿಮರು ಪ್ರಧಾನವಾಗಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾರೆ, ಆದರೆ ಹಿಂದೂ ಮತಗಳು ವಿಭಜನೆಯಾಗುತ್ತವೆ ಎಂದು ಶರ್ಮ ಹೇಳಿಕೊಂಡಿದ್ದಾರೆ. ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರವು "ವಿಶೇಷ ಸಮುದಾಯದಿಂದ" ಮತ ನಿಷ್ಠೆಯಿಂದ "ಒಳನುಸುಳುಕೋರರನ್ನು ಆಹ್ವಾನಿಸುತ್ತದೆ" ಎಂದು ಅವರು ಆರೋಪಿಸಿದರು.

ಹಿಮಂತ್ ಬಿಸ್ವಾ ಶರ್ಮ ಅವರು ಮಾಡಿದ ಭಾಷಣವು ಅವರು ಮತ್ತು ಅವರ ಪಕ್ಷವಾದ ಬಿಜೆಪಿಯಿಂದ ಪ್ರಚಾರ ಮಾಡುತ್ತಿರುವ ವಿಭಜಕ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಇಂಡಿಯಾ ಬ್ಲಾಕ್ ನಾಯಕರು ಆರೋಪಿಸಿದ್ದು, 24 ಗಂಟೆಯೊಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಇಂಡಿಯಾ ಬ್ಲಾಕ್ ಎಚ್ಚರಿಸಿದೆ.

"ಅವರು ಉದ್ದೇಶಪೂರ್ವಕವಾಗಿ ಇಡೀ ಧಾರ್ಮಿಕ ಅಲ್ಪಸಂಖ್ಯಾತರನ್ನು ಒಂದೇ ಬೆಳಕಿನಲ್ಲಿ ಚಿತ್ರಿಸುತ್ತಿದ್ದಾರೆ, ರಾಜಕೀಯ ಲಾಭಕ್ಕಾಗಿ ಸಾಮಾಜಿಕ ವಿಭಜನೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಅವರನ್ನು ಒಳನುಸುಳುವವರು ಎಂದು ಬ್ರಾಂಡ್ ಮಾಡುತ್ತಿದ್ದಾರೆ. ಇಂತಹ ಮಾತುಗಳು ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸುತ್ತದೆ ಮತ್ತು ಚುನಾವಣಾ ಲಾಭಕ್ಕಾಗಿ ಜಾರ್ಖಂಡ್‌ನ ಸಾಮಾಜಿಕ ರಚನೆಯನ್ನು ಮುರಿಯುವ ಬೆದರಿಕೆ ಹಾಕುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದರು.

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಶರ್ಮ ಅವರ ಧ್ವನಿಮುದ್ರಣಗಳನ್ನು ಇಂಡಿಯಾ ಬ್ಲಾಕ್ ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT