ನಾಯ್ಡು, ನಿತೀಶ್‌, ಮೌಲಾನಾ ಅರ್ಷದ್ 
ದೇಶ

ವಕ್ಫ್ ಕಾಯ್ದೆ ಪಾಸಾದ್ರೆ ಮುಂದೆ ನೀವೂ ಅನುಭವಿಸ್ತೀರಾ?: ನಾಯ್ಡು, ನಿತೀಶ್‌ಗೆ ಬಹಿರಂಗ ಮೌಲಾನಾ ಅರ್ಷದ್ ಸವಾಲು

ಈ ಎರಡು ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ಮುಸ್ಲಿಮರ ಭಾವನೆಗಳು ಇದಕ್ಕೆ ಎಷ್ಟು ಸಂಬಂಧಿಸಿವೆ ಎಂಬುದನ್ನು ಅವರು ತಮ್ಮ ಬಂಗಲೆಗಳಲ್ಲಿ ಕುಳಿತು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶದ ಜನತೆ ಬಿಜೆಪಿಯನ್ನು ಸೋಲಿಸಿದ್ದರು. ಆದರೆ ಬಿಜೆಪಿ ಸರಕಾರ ಎರಡು ಊರುಗೋಲಿನಿಂದ ನಡೆಯುತ್ತಿದೆ.

ನವದೆಹಲಿ: ವಕ್ಫ್ ಬೋರ್ಡ್ ತಿದ್ದುಪಡಿ ಕುರಿತು ಪ್ರತಿಕ್ರಿಯಿಸಿರುವ ಜಮಿಯತ್-ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ಪ್ರಸ್ತುತ ದೇಶದಲ್ಲಿ ಮತೀಯ ಮನಸ್ಥಿತಿ ಇದೆ. ವಕ್ಫ್ ಮಸೂದೆ ಪ್ರಮುಖ ವಿಷಯವಾಗಿದೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಬಲ ನೀಡಿದ್ದು ವಕ್ಫ್ ಕಾಯ್ದೆ ಪಾಸಾದರೆ ಅದರ ಪರಿಣಾಮವನ್ನು ನೀವು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಮೀಯತ್-ಉಲೇಮಾ-ಎ-ಹಿಂದ್‌ನ ಸಂವಿಧಾನ ಸಂರಕ್ಷಣಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೌಲಾನಾ ಅರ್ಷದ್ ಮದನಿ, ಈ ಎರಡು ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ಮುಸ್ಲಿಮರ ಭಾವನೆಗಳು ಇದಕ್ಕೆ ಎಷ್ಟು ಸಂಬಂಧಿಸಿವೆ ಎಂಬುದನ್ನು ಅವರು ತಮ್ಮ ಬಂಗಲೆಗಳಲ್ಲಿ ಕುಳಿತು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶದ ಜನತೆ ಬಿಜೆಪಿಯನ್ನು ಸೋಲಿಸಿದ್ದರು. ಆದರೆ ಬಿಜೆಪಿ ಸರಕಾರ ಎರಡು ಊರುಗೋಲಿನಿಂದ ನಡೆಯುತ್ತಿದೆ. ನಾಯ್ಡು ಸಾಹೇಬರೇ ಈ ತಿಂಗಳ ಅಂತ್ಯದೊಳಗೆ ಅಥವಾ ಡಿಸೆಂಬರ್‌ನಲ್ಲಿ ಚಂದ್ರಬಾಬು ನಾಯ್ಡು ಅವರ 'ಏರಿಯಾ'ದಲ್ಲಿ ಸುಮಾರು ಐದು ಲಕ್ಷ ಮುಸ್ಲಿಮರನ್ನು ಸೇರಿ ನಮ್ಮ ತಾಕತ್ತನ್ನು ಪ್ರದರ್ಶಿಸುತ್ತೇವೆ. ಜೊತೆಗೆ ಮುಸ್ಲಿಮರ ಭಾವನೆಗಳನ್ನು ಅವರ ಮುಂದೆ ಎಳೆಎಳೆಯಾಗಿ ಮಂಡಿಸುತ್ತೇವೆ ಎಂದರು.

ವಕ್ಫ್ ಕಾಯ್ದೆ ಪಾಸಾದರೆ ದೇಶವನ್ನು ಆಳುತ್ತಿರುವ ಬಿಜೆಪಿಯ ಊರುಗೋಲುಗಳೂ ಹೊಣೆಯಾಗುತ್ತವೆ ಎಂದು ಅರ್ಷದ್ ಮದನಿ ಟಿಡಿಪಿ ಮತ್ತು ಜೆಡಿಯುಗೆ ಎಚ್ಚರಿಕೆ ನೀಡಿದರು. ಈ ಮಸೂದೆಯಲ್ಲಿ ಮುಸ್ಲಿಮರಿಗೆ ತೊಂದರೆಯಾಗುವ ವಿಷಯವಿದೆ. ನವೆಂಬರ್ 24ರಂದು ಜಮಿಯತ್-ಉಲೇಮಾ-ಎ-ಹಿಂದ್, ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪಾಟ್ನಾದಲ್ಲಿ ಜಮಿಯತ್ ದೊಡ್ಡ ರ್ಯಾಲಿಯನ್ನು ಆಯೋಜಿಸುತ್ತದೆ ಎಂದು ಹೇಳಿಕೊಂಡಿದೆ. ಇದರಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಭಾಗವಹಿಸಲಿದ್ದಾರೆ ಎಂದರು.

2024ರ ಅಕ್ಟೋಬರ್ 2ರಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಮುಸ್ಲಿಂರು ವಕ್ಫ್ ಮಸೂದೆಯಲ್ಲಿ ತಿದ್ದುಪಡಿಗಳನ್ನು ಬಯಸದಿದ್ದರೆ, ಅದನ್ನು ಬದಿಗಿಡಬೇಕು ಎಂದು ಹೇಳಿತ್ತು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಎಂಪಿಬಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಮೊಹಮ್ಮದ್ ಫಜಲುರಹೀಂ ಮುಜಾದಿದಿ, ಕೇವಲ 13 ದಿನಗಳಲ್ಲಿ 3.66 ಕೋಟಿಗೂ ಹೆಚ್ಚು ಮುಸ್ಲಿಮರು ಇಮೇಲ್ ಮೂಲಕ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವಾಗ ಮುಸ್ಲಿಮರು ಈ ಮಸೂದೆಯನ್ನು ಬಯಸುವುದಿಲ್ಲವೋ ಆಗ ಸರ್ಕಾರ ಅದನ್ನು ನಿರ್ಲಕ್ಷಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!