TNIE
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದ ಜನನಿಬಿಡ ಮಾರುಕಟ್ಟೆ ಮೇಲೆ ಗ್ರೆನೇಡ್ ದಾಳಿ, 12 ಮಂದಿಗೆ ಗಂಭೀರ ಗಾಯ!

ಕಳೆದ ಕೆಲವು ದಿನಗಳಿಂದ ಕಣಿವೆಯ ಕೆಲವು ಭಾಗಗಳಲ್ಲಿ ಉಗ್ರ ದಾಳಿಗಳು ಮತ್ತು ಎನ್‌ಕೌಂಟರ್‌ಗಳು ಹೆಚ್ಚಾಗುತ್ತಿವೆ. ಶ್ರೀನಗರದ 'ಸಂಡೇ ಮಾರ್ಕೆಟ್'ನಲ್ಲಿ ಮುಗ್ಧ ವ್ಯಾಪಾರಿಗಳ ಮೇಲೆ ಗ್ರೆನೇಡ್ ದಾಳಿಯ ಸುದ್ದಿಯು ತೀವ್ರ ಕಳವಳಕಾರಿಯಾಗಿದೆ.

ಶ್ರೀನಗರ: ಶ್ರೀನಗರದ ಪ್ರವಾಸಿ ಸ್ವಾಗತ ಕೇಂದ್ರ (ಟಿಆರ್‌ಸಿ) ಬಳಿ ಗ್ರೆನೇಡ್ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಗಾಯಗೊಂಡಿದ್ದಾರೆ. ವಾರಕ್ಕೊಮ್ಮೆ ನಡೆಯುವ 'ಸಂಡೇ ಮಾರ್ಕೆಟ್‌'ಗೆ ಈ ಪ್ರದೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾಗ ಸ್ಫೋಟ ಸಂಭವಿಸಿದೆ.

ಘಟನೆಯ ಕುರಿತು ಅಧಿಕಾರಿಯೊಬ್ಬರು, ಜನನಿಬಿಡ ಮಾರುಕಟ್ಟೆ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಗ್ರೆನೇಡ್ ದಾಳಿಯಲ್ಲಿ ಅನೇಕ ನಾಗರಿಕರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ SMHS ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದ್ದು ಪ್ರದೇಶವನ್ನು ಸುತ್ತುವರಿಯಲಾಗಿದೆ. ದಾಳಿಕೋರರನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದರು. ಗಾಯಗೊಂಡವರೆಲ್ಲರೂ ಸ್ಥಿರವಾಗಿದ್ದಾರೆ ಎಂದು ಶ್ರೀನಗರದ ಎಸ್‌ಎಂಎಚ್‌ಎಸ್‌ನ ವೈದ್ಯರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಣಿವೆಯ ಕೆಲವು ಭಾಗಗಳಲ್ಲಿ ಉಗ್ರ ದಾಳಿಗಳು ಮತ್ತು ಎನ್‌ಕೌಂಟರ್‌ಗಳು ಹೆಚ್ಚಾಗುತ್ತಿವೆ. ಶ್ರೀನಗರದ 'ಸಂಡೇ ಮಾರ್ಕೆಟ್'ನಲ್ಲಿ ಮುಗ್ಧ ವ್ಯಾಪಾರಿಗಳ ಮೇಲೆ ಗ್ರೆನೇಡ್ ದಾಳಿಯ ಸುದ್ದಿಯು ತೀವ್ರ ಕಳವಳಕಾರಿಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ನಿನ್ನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಓರ್ವ ಪಾಕ್ ಭಯೋತ್ಪಾದಕ ಸೇರಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ ಬೆನ್ನಲ್ಲೇ ಈ ಗ್ರೆನೇಡ್ ದಾಳಿ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT