ಬಂಧನ (ಸಾಂಕೇತಿಕ ಚಿತ್ರ) online desk
ದೇಶ

ಬಿಜೆಪಿ ಸಂಸದ ಗಾರ್ಗ್ ವಿರುದ್ಧ ಮಾನಹಾನಿಕರ ವರದಿ: ದಿನ ಪತ್ರಿಕೆಯ ಸಂಪಾದಕರ ಬಂಧನ

ಡಾಲಿ ಶರ್ಮಾ ಅವರು, ‘ತಾನು ಭೂ ಮಾಫಿಯಾ’ದ ಭಾಗವೆಂದು ಕರೆದು ತಮ್ಮ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದರು.

ಗಾಜಿಯಾಬಾದ್‌: ಬಿಜೆಪಿ ಸಂಸದ ಅತುಲ್ ಗಾರ್ಗ್ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ಗಾಜಿಯಾಬಾದ್‌ನ ಸ್ಥಳೀಯ ದಿನ ಪತ್ರಿಕೆಯ ಸಂಪಾದಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಗಾಜಿಯಾಬಾದ್‌ನ ಬಿಜೆಪಿ ಸಂಸದ ಅತುಲ್ ಗಾರ್ಗ್ ಅವರು ಅಕ್ಟೋಬರ್ 6 ರಂದು ಕಾಂಗ್ರೆಸ್ ನಾಯಕ ಡಾಲಿ ಶರ್ಮಾ ಅವರು ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು.

ಡಾಲಿ ಶರ್ಮಾ ಅವರು, ‘ತಾನು ಭೂ ಮಾಫಿಯಾ’ದ ಭಾಗವೆಂದು ಕರೆದು ತಮ್ಮ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದರು.

ಈ ‘ಮಾನಹಾನಿಕರ’ ಸುದ್ದಿ ಪ್ರಕಟಿಸಿದ್ದಕ್ಕಾಗಿ ಆಪ್ ಅಭಿ ತಕ್ ಸಂಪಾದಕ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಶನಿವಾರ ಅವರನ್ನು ಬಂಧಿಸಲಾಗಿದೆ.

ಗರ್ಗ್ ಅವರು 31,000 ಚದರ ಮೀಟರ್ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ಅದರಲ್ಲಿ ಹೌಸಿಂಗ್ ಸೊಸೈಟಿ ನಿರ್ಮಿಸಿದ್ದಾರೆ ಎಂದು ಶರ್ಮಾ ಆರೋಪಿಸಿದ್ದರು. ಅಲ್ಲದೆ ತನ್ನ ಆರೋಪಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ದಾಖಲೆಗಳನ್ನು ಕೆಲವು ಸ್ಥಳೀಯ ಪತ್ರಿಕೆಗಳು ಮತ್ತು ವೆಬ್ ಪೋರ್ಟಲ್‌ಗಳು ಪ್ರಕಟಿಸಿದವು.

ಏತನ್ಮಧ್ಯೆ, ಸ್ಥಳೀಯ ಪತ್ರಕರ್ತರ ಸಂಘ ಜಿಲ್ಲಾಧಿಕಾರಿ ಇಂದ್ರ ವಿಕ್ರಮ್ ಸಿಂಗ್ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಈ ಸಂಬಂಧ ಮನವಿ ಪತ್ರ ಸಲ್ಲಿಸಿದ್ದು, ಅದರಲ್ಲಿ ಪೊಲೀಸರು ಒತ್ತಡದಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT