ಫಾರೂಕ್ ಅಬ್ದುಲ್ಲಾ ವಿರುದ್ಧ ಪ್ರತಿಭಟನೆ ಚಿತ್ರ 
ದೇಶ

ಜಮ್ಮು: ಉಗ್ರರ ಕುರಿತು ಹೇಳಿಕೆ; ಫಾರೂಕ್ ಅಬ್ದುಲ್ಲಾ ವಿರುದ್ಧ ರಾಷ್ಟ್ರೀಯ ಬಜರಂಗ ದಳ ಪ್ರತಿಭಟನೆ

ಭಯೋತ್ಪಾದಕರನ್ನು ಕೊಲ್ಲಬಾರದು, ಅವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಪಾರೂಕ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಜಮ್ಮು: ಉಗ್ರರ ಕುರಿತು ರಾಷ್ಟ್ರೀಯ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ ಹೇಳಿಕೆ ವಿರೋಧಿಸಿ ರಾಷ್ಟ್ರೀಯ ಬಜರಂಗ ದಳ ಸೋಮವಾರ ಪ್ರತಿಭಟನೆ ನಡೆಸಿತು. ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಪಾಕಿಸ್ತಾನ ಉಗ್ರರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಭಯೋತ್ಪಾದಕರನ್ನು ಕೊಲ್ಲಬಾರದು, ಅವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಪಾರೂಕ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಪಾಕಿಸ್ತಾನ ಪ್ರೇರಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರಾಡಳಿತಪ್ರದೇಶದಲ್ಲಿ ಉಗ್ರರಿಗೆ ಬೆಂಬಲ ನೀಡುತ್ತಿರುವ ಸ್ಥಳೀಯರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉಗ್ರ ಚಟುವಟಿಕೆಯಲ್ಲಿ ಪಾಕಿಸ್ತಾನದ ಪಾತ್ರ ಹಾಗೂ ಅಬ್ದುಲ್ಲಾ ಅವರ ಹೇಳಿಕೆಯನ್ನು ಆರ್ ಬಿಡಿ ಅಧ್ಯಕ್ಷ ರಾಕೇಶ್ ಕುಮಾರ್ ಹಾಗೂ ಸಂಘಟನೆಯ ಸದಸ್ಯರು ಖಂಡಿಸಿದರು.

ಪಾಕಿಸ್ತಾನ ಪ್ರೇರಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರಾಡಳಿತಪ್ರದೇಶದಲ್ಲಿ ಉಗ್ರರಿಗೆ ಬೆಂಬಲ ನೀಡುತ್ತಿರುವ ಸ್ಥಳೀಯರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉಗ್ರ ಚಟುವಟಿಕೆಯಲ್ಲಿ ಪಾಕಿಸ್ತಾನದ ಪಾತ್ರ ಹಾಗೂ ಅಬ್ದುಲ್ಲಾ ಅವರ ಹೇಳಿಕೆಯನ್ನು ಆರ್ ಬಿಡಿ ಅಧ್ಯಕ್ಷ ರಾಕೇಶ್ ಕುಮಾರ್ ಹಾಗೂ ಸಂಘಟನೆಯ ಸದಸ್ಯರು ಖಂಡಿಸಿದರು.

ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚನೆಯಾದ ನಂತರ ಅನೇಕ ಬಾರಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿವೆ. ಪ್ರತಿಯೊಬ್ಬರು ಇದನ್ನು ನೋಡುತ್ತಿದ್ದಾರೆ. ಉಗ್ರರ ಕುರಿತ ಅಬ್ದುಲ್ಲಾ ಅವರ ಹೇಳಿಕೆ ಖಂಡಿಸಿ ರಾಷ್ಟ್ರೀಯ ಬಜರಂಗ ದಳ ಪ್ರತಿಭಟನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT